‘ಕಚ್ಚಾ ತೈಲ ಬೆಲೆ ತಗ್ಗಿಸಲು, ಮಾರುಕಟ್ಟೆಯಲ್ಲಿನ ಅಸ್ಥಿರತೆಯನ್ನು ನಿವಾರಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ ಸಿದ್ಧವಿದೆ’ ಎಂದುಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ರಾಮೇಶ್ವರ ತೆಲಿ ಅವರು ಗುರುವಾರವಷ್ಟೇ ಲೋಕಸಭೆಗೆ ತಿಳಿಸಿದ್ದಾರೆ. 2021ರ ನವೆಂಬರ್ನಲ್ಲಿ ಭಾರತವು ತನ್ನ ಸಂಗ್ರಹಾಗಾರದಲ್ಲಿನ 50 ಲಕ್ಷ ಬ್ಯಾರೆಲ್ ತೈಲವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಒಪ್ಪಿತ್ತು.