ಇಲ್ಲಿನ ವಿಧಾನಸಭಾ ಕ್ಷೇತ್ರದ ಮತದಾರರಿಗೆ, ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲು ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕುಮಾರಸ್ವಾಮಿ ಅವರು ನಡೆಸಿರುವ ಭ್ರಷ್ಟಾಚಾರದ ಅನೇಕ ಹಗರಣಗಳ ಬಗ್ಗೆ ನನಗೆ ಮಾಹಿತಿ ಇದೆ. ಸೂಕ್ತ ಸಂದರ್ಭದಲ್ಲಿ ಅವುಗಳನ್ನು ಬಹಿರಂಗಪಡಿಸುತ್ತೇನೆ’ ಎಂದು ಮಾಹಿತಿ ನೀಡಿದರು.