ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಾಟಾಗೆ ಬಿಸ್ಲೆರಿ ಮಾರಲ್ಲ ಎಂದ ರಮೇಶ್‌: ಕಂಪನಿ ಮುನ್ನಡೆಸಲಿದ್ದಾರೆ ಪುತ್ರಿ

Last Updated 22 ಮಾರ್ಚ್ 2023, 9:06 IST
ಅಕ್ಷರ ಗಾತ್ರ

ದೇಶದ ಪ್ರಮುಖ ಪ್ಯಾಕ್‌ ಮಾಡಿದ ನೀರಿನ ಮಾರಾಟಗಾರ ಕಂಪನಿ ‘ಬಿಸ್ಲೆರಿ‘ಯನ್ನು ಖರೀದಿ ಮಾಡುವು ವ್ಯವಹಾರದಿಂದ ಟಾಟಾ ಸಮೂಹವು ಹಿಂದೆ ಸರಿದ ಬೆನ್ನಲ್ಲೇ ಇದೀಗ, ಬಿಸ್ಲೆರಿಯ ಸಂಸ್ಥಾಪಕ ರಮೇಶ್‌ ಚೌಹಾಣ್‌ ಅವರ ಪುತ್ರಿ ಜಯಂತಿ ಚೌಹಾಣ್‌ ಅವರು ಸಂಸ್ಥೆಯನ್ನು ಮುನ್ನಡೆಸಲಿದ್ದಾರೆ ಎಂದು ಕಂಪನಿ ಹೇಳಿದೆ.

ಉದ್ಯಮವನ್ನು ಮಾರಾಟ ಮಾಡುವ ಯಾವುದೇ ಉದ್ದೇಶ ಇಲ್ಲ. ಈ ಬಗ್ಗೆ ಯಾರ ಜತೆಯೂ ಮಾತುಕತೆ ನಡೆಸಿಲ್ಲ. ಸಿಇಒ ಏಂಜಲೋ ಜಾರ್ಜ್‌ ನೇತೃತ್ವದ ತಂಡ ಕಂಪನಿಯನ್ನು ಮುನ್ನಡೆಸಲಿದ್ದು, ತಮ್ಮ ಪುತ್ರಿ ಜಯಂತಿಯ ಉದ್ಯಮವನ್ನು ನೋಡಿಕೊಳ್ಳಲಿದ್ದಾರೆ ಎಂದು ರಮೇಶ್‌ ಅವರ ಹೇಳಿಕೆಯನ್ನು ಉಲ್ಲೇಖಿಸಿ ‘ಎನ್‌ಡಿಟಿವಿ‘ ವರದಿ ಮಾಡಿದೆ.

ಸದ್ಯ ಜಯಂತಿಯವರು ಕಂಪನಿಯ ಉಪಾಧ್ಯಕ್ಷೆಯಾಗಿದ್ದು, ಕಳೆದ ಕೆಲವು ವರ್ಷಗಳಿಂದ ಉದ್ಯಮದ ಭಾಗವಾಗಿದ್ದಾರೆ.

ಕಂಪನಿಯನ್ನು ಮಾರಾಟ ಮಾಡಲು ರಮೇಶ್‌ ಅವರು ಕಳೆದ ನಾಲ್ಕು ತಿಂಗಳಿನಿಂದ ಟಾಟಾ ಕನ್ಸೂಮರ್‌ ಪ್ರಾಡೆಕ್ಟ್‌ ಲಿಮಿಟೆಡ್‌ ಜತೆ ಮಾತುಕತೆ ನಡೆಸಿದ್ದರು. ಇದೀಗ ಅವರ ಹೇಳಿಕೆಯಿಂದಾಗಿ ಮಾತುಕತೆ ಮುರಿದು ಬಿದ್ದಂತಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT