<p><strong>ನವದೆಹಲಿ:</strong>ಈ ಬಾರಿನೇರ ತೆರಿಗೆ ಸಂಗ್ರಹವು ಅಂದಾಜಿಗಿಂತಲೂ ಕಡಿಮೆ ಆಗಲಿದೆ. ಹೀಗಾಗಿ ಕೇಂದ್ರ ಸರ್ಕಾರವು ತೆರಿಗೆ ತಪ್ಪಿಸುವವರಿಗೆ ‘ಆದಾಯ ಘೋಷಣೆ ಯೋಜನೆ’ಯನ್ನು (ಐಡಿಎಸ್) ಜಾರಿಗೊಳಿಸುವ ಸಾಧ್ಯತೆ ಇದೆ.</p>.<p>ತೆರಿಗೆ ಮತ್ತು ದಂಡ ಪಾವತಿಸುವ ಮೂಲಕ ಕಪ್ಪುಹಣ ಮತ್ತು ಅಕ್ರಮ ಆಸ್ತಿ ಘೋಷಣೆ ಮಾಡಿಕೊಳ್ಳಲು ಈ ಯೋಜನೆಯಲ್ಲಿ ಅವಕಾಶ ಲಭ್ಯವಾಗಲಿದೆ.</p>.<p>2016ರಲ್ಲಿ ಈ ಯೋಜನೆಯ ಮೂಲಕ ₹ 65 ಸಾವಿರ ಕೋಟಿ ಕಪ್ಪುಹಣ ಘೋಷಣೆಯಾಗಿತ್ತು.ಈ ಬಾರಿ ₹ 50 ಸಾವಿರ ಕೋಟಿ ಸಂಗ್ರಹವಾಗುವ ನಿರೀಕ್ಷೆಯನ್ನು ಕೇಂದ್ರ ಸರ್ಕಾರ ಇಟ್ಟುಕೊಂಡಿದೆ.</p>.<p>ಕಳೆದ ಬಾರಿಶೇ 45ರಷ್ಟು ತೆರಿಗೆ ಮತ್ತು ದಂಡ ಕಟ್ಟಿ ಅಕ್ರಮ ಆಸ್ತಿ ಮತ್ತು ಕಪ್ಪುಹಣವನ್ನು ಸಕ್ರಮಗೊಳಿಸಿಕೊಳ್ಳಲು ಅವಕಾಶ ನೀಡಲಾಗಿತ್ತು.</p>.<p>ಹಲವು ವರ್ಷಗಳಿಂದ ಬಹಳಷ್ಟು ಸಿರಿವಂತರು ತಮ್ಮ ನೈಜ ಆದಾಯ ಮತ್ತು ಆಸ್ತಿಗಳ ಮಾಹಿತಿಯನ್ನು ಘೋಷಿಸಿಕೊಂಡಿಲ್ಲ’ ಎಂದು ಅಧಿಕಾರಿ ಮೂಲಗಳು ಪ್ರಜಾವಾಣಿಗೆ ಮಾಹಿತಿ ನೀಡಿವೆ.</p>.<p>ನೇರ ತೆರಿಗೆ ಮೂಲಕ ₹ 13.35 ಲಕ್ಷ ಕೋಟಿ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಇದುವರೆಗೆ ₹ 5.2 ಲಕ್ಷ ಕೋಟಿ ಮಾತ್ರವೇ ಸಂಗ್ರಹವಾಗಿದೆ. ಏಪ್ರಿಲ್–ಸೆಪ್ಟೆಂಬರ್ ಅವಧಿಯಲ್ಲಿ ತೆರಿಗೆ ಸಂಗ್ರಹವು ಶೇ 3ರಷ್ಟು ಅಲ್ಪ ಪ್ರಗತಿ ಕಂಡಿದೆ.</p>.<p>ಜಿಎಸ್ಟಿ ಸಂಗ್ರಹದಲ್ಲಿ ಇಳಿಕೆ ಆಗುತ್ತಿರುವುದರಿಂದ ಒಟ್ಟಾರೆ ತೆರಿಗೆ ಸಂಗ್ರಹದ ಮೇಲೆ ಪರಿಣಾಮ ಬೀರುವ ಅಂದಾಜು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಈ ಬಾರಿನೇರ ತೆರಿಗೆ ಸಂಗ್ರಹವು ಅಂದಾಜಿಗಿಂತಲೂ ಕಡಿಮೆ ಆಗಲಿದೆ. ಹೀಗಾಗಿ ಕೇಂದ್ರ ಸರ್ಕಾರವು ತೆರಿಗೆ ತಪ್ಪಿಸುವವರಿಗೆ ‘ಆದಾಯ ಘೋಷಣೆ ಯೋಜನೆ’ಯನ್ನು (ಐಡಿಎಸ್) ಜಾರಿಗೊಳಿಸುವ ಸಾಧ್ಯತೆ ಇದೆ.</p>.<p>ತೆರಿಗೆ ಮತ್ತು ದಂಡ ಪಾವತಿಸುವ ಮೂಲಕ ಕಪ್ಪುಹಣ ಮತ್ತು ಅಕ್ರಮ ಆಸ್ತಿ ಘೋಷಣೆ ಮಾಡಿಕೊಳ್ಳಲು ಈ ಯೋಜನೆಯಲ್ಲಿ ಅವಕಾಶ ಲಭ್ಯವಾಗಲಿದೆ.</p>.<p>2016ರಲ್ಲಿ ಈ ಯೋಜನೆಯ ಮೂಲಕ ₹ 65 ಸಾವಿರ ಕೋಟಿ ಕಪ್ಪುಹಣ ಘೋಷಣೆಯಾಗಿತ್ತು.ಈ ಬಾರಿ ₹ 50 ಸಾವಿರ ಕೋಟಿ ಸಂಗ್ರಹವಾಗುವ ನಿರೀಕ್ಷೆಯನ್ನು ಕೇಂದ್ರ ಸರ್ಕಾರ ಇಟ್ಟುಕೊಂಡಿದೆ.</p>.<p>ಕಳೆದ ಬಾರಿಶೇ 45ರಷ್ಟು ತೆರಿಗೆ ಮತ್ತು ದಂಡ ಕಟ್ಟಿ ಅಕ್ರಮ ಆಸ್ತಿ ಮತ್ತು ಕಪ್ಪುಹಣವನ್ನು ಸಕ್ರಮಗೊಳಿಸಿಕೊಳ್ಳಲು ಅವಕಾಶ ನೀಡಲಾಗಿತ್ತು.</p>.<p>ಹಲವು ವರ್ಷಗಳಿಂದ ಬಹಳಷ್ಟು ಸಿರಿವಂತರು ತಮ್ಮ ನೈಜ ಆದಾಯ ಮತ್ತು ಆಸ್ತಿಗಳ ಮಾಹಿತಿಯನ್ನು ಘೋಷಿಸಿಕೊಂಡಿಲ್ಲ’ ಎಂದು ಅಧಿಕಾರಿ ಮೂಲಗಳು ಪ್ರಜಾವಾಣಿಗೆ ಮಾಹಿತಿ ನೀಡಿವೆ.</p>.<p>ನೇರ ತೆರಿಗೆ ಮೂಲಕ ₹ 13.35 ಲಕ್ಷ ಕೋಟಿ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಇದುವರೆಗೆ ₹ 5.2 ಲಕ್ಷ ಕೋಟಿ ಮಾತ್ರವೇ ಸಂಗ್ರಹವಾಗಿದೆ. ಏಪ್ರಿಲ್–ಸೆಪ್ಟೆಂಬರ್ ಅವಧಿಯಲ್ಲಿ ತೆರಿಗೆ ಸಂಗ್ರಹವು ಶೇ 3ರಷ್ಟು ಅಲ್ಪ ಪ್ರಗತಿ ಕಂಡಿದೆ.</p>.<p>ಜಿಎಸ್ಟಿ ಸಂಗ್ರಹದಲ್ಲಿ ಇಳಿಕೆ ಆಗುತ್ತಿರುವುದರಿಂದ ಒಟ್ಟಾರೆ ತೆರಿಗೆ ಸಂಗ್ರಹದ ಮೇಲೆ ಪರಿಣಾಮ ಬೀರುವ ಅಂದಾಜು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>