ಕೌಶಲ ಅಭಿವೃದ್ಧಿಯಲ್ಲಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಸೇರಿದವರಿಗೆ ಹಾಗೂ ಸ್ವಸಹಾಯ ಸಂಘಗಳ ಸದಸ್ಯರಿಗೆ ಉದ್ಯೋಗಾವಕಾಶ ಸೃಷ್ಟಿಯಲ್ಲಿ ಈ ಯೋಜನೆಗಳು ಮಹತ್ವದ್ದಾಗುತ್ತವೆ ಎಂದು ಬೊಮ್ಮಾಯಿ ಹೇಳಿದರು. ರಾಜ್ಯದಲ್ಲಿನ ಜಿಎಸ್ಟಿ ಸಂಗ್ರಹ ಹಾಗೂ ರಾಜ್ಯಕ್ಕೆ ಬರಬೇಕಿರುವ ಪರಿಹಾರ ಮೊತ್ತದ ಬಗ್ಗೆಯೂ ಬೊಮ್ಮಾಯಿ ಅವರು ನಿರ್ಮಲಾ ಅವರ ಜೊತೆ ಚರ್ಚಿಸಿದರು.