‘ಆರ್ಥಿಕ, ತಾಂತ್ರಿಕ ಕಾರಣಗಳು, ಮಾರುಕಟ್ಟೆ ನಿಯಂತ್ರಣ ಕ್ರಮಗಳು ಮತ್ತು ವಿದ್ಯುತ್ ಚಾಲಿತ ವಾಹನಗಳಿಂದಾಗಿ ದೇಶಿ ವಾಹನ ತಯಾರಿಕಾ ವಲಯದಲ್ಲಿ ವ್ಯಾಪಕ ಬದಲಾವಣೆ ಕಂಡು ಬರುತ್ತಿದೆ. ಅದಕ್ಕೆ ಅನುಗುಣವಾಗಿ ಕಂಪನಿಯು ಹಲವಾರು ಬದಲಾವಣೆಗಳನ್ನು ಅಳವಡಿಸಿಕೊಳ್ಳುತ್ತಿದೆ. ಈ ಉದ್ದೇಶಕ್ಕೆ ₹ 82 ಕೋಟಿ ತೆಗೆದು ಇರಿಸಲಾಗಿದೆ’ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸೌಮಿತ್ರ ಭಟ್ಟಾಚಾರ್ಯ ಹೇಳಿದ್ದಾರೆ.