‘ತೈಲ ಸಂಸ್ಕರಣೆ ಮತ್ತು ಇಂಧನ ಮಾರುಕಟ್ಟೆಯಲ್ಲಿ ದೇಶದ ಎರಡನೇ ಅತಿದೊಡ್ಡ ಕಂಪನಿ ಆಗಿರುವ ಬಿಪಿಸಿಎಲ್, ಹೊಸ ಅವಕಾಶಗಳನ್ನು ಬಳಸಿಕೊಳ್ಳಲು ತನ್ನ ಕಾರ್ಯತಂತ್ರಗಳನ್ನು ಮರುಪರಿಶೀಲನೆಗೆ ಒಳಪಡಿಸುತ್ತಿದೆ’ ಎಂದು ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅರುಣ್ ಕುಮಾರ್ ಸಿಂಗ್ ಅವರು ಈಚಿನ ವಾರ್ಷಿಕ ವರದಿಯಲ್ಲಿ ಹೇಳಿದ್ದಾರೆ.