<p><strong>ಮಂಗಳೂರು:</strong> ‘ಮಹಾತ್ಮ ಗಾಂಧಿ ಅವರ ಸ್ವದೇಶಿ ಎಂಬ ಉದಾತ್ತ ಚಿಂತನೆಯ ಮೂಲಕ ಸ್ವಾತಂತ್ರ್ಯಪೂರ್ವದಲ್ಲಿಯೇ ಪ್ರಾರಂಭಗೊಂಡ ಕರ್ಣಾಟಕ ಬ್ಯಾಂಕ್, ಈಗ ಸಾವಿರ ಶಾಖೆಗಳನ್ನು ಹೊಂದುವ ಗುರಿ ಇಟ್ಟುಕೊಂಡಿದೆ’ ಎಂದು ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್. ತಿಳಿಸಿದರು.</p>.<p>ನಗರದ ಕಾವೂರಿನ ಗಾಂಧಿನಗರದಲ್ಲಿನಡೆದ ಬ್ಯಾಂಕ್ನ 825ನೇ ಶಾಖೆ ಮತ್ತು ಕ್ಯಾಷ್ ರಿಸೈಕ್ಲರ್ನ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘94 ವರ್ಷಗಳಲ್ಲಿ ಬ್ಯಾಂಕ್ ಯಾವುದೇ ನಷ್ಟ ಕಂಡಿಲ್ಲ. ನೂತನ ಯೋಜನೆಗಳ ಮೂಲಕ ಬ್ಯಾಂಕ್ ತನ್ನ ಗ್ರಾಹಕರಿಗೆ ಇನ್ನಷ್ಟು ಹತ್ತಿರವಾಗಿದೆ. ಜನರ ಸ್ಪಂದನೆಯನ್ನು ಆಧರಿಸಿ ಹೊಸ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ಬ್ಯಾಂಕಿಂಗ್ ವ್ಯವಸ್ಥೆ ವೇಗ ಪಡೆಯುತ್ತಿದೆ. ಬೆಂಗಳೂರಿನಲ್ಲಿಯೂ ಎರಡು ಶಾಖೆಗಳು ಆರಂಭಗೊಳ್ಳುತ್ತಿದ್ದು, ಈ ಮೂಲಕ ಬ್ಯಾಂಕ್ 827 ಶಾಖೆಗಳನ್ನು ಹೊಂದಲಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ಮಹಾತ್ಮ ಗಾಂಧಿ ಅವರ ಸ್ವದೇಶಿ ಎಂಬ ಉದಾತ್ತ ಚಿಂತನೆಯ ಮೂಲಕ ಸ್ವಾತಂತ್ರ್ಯಪೂರ್ವದಲ್ಲಿಯೇ ಪ್ರಾರಂಭಗೊಂಡ ಕರ್ಣಾಟಕ ಬ್ಯಾಂಕ್, ಈಗ ಸಾವಿರ ಶಾಖೆಗಳನ್ನು ಹೊಂದುವ ಗುರಿ ಇಟ್ಟುಕೊಂಡಿದೆ’ ಎಂದು ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್. ತಿಳಿಸಿದರು.</p>.<p>ನಗರದ ಕಾವೂರಿನ ಗಾಂಧಿನಗರದಲ್ಲಿನಡೆದ ಬ್ಯಾಂಕ್ನ 825ನೇ ಶಾಖೆ ಮತ್ತು ಕ್ಯಾಷ್ ರಿಸೈಕ್ಲರ್ನ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘94 ವರ್ಷಗಳಲ್ಲಿ ಬ್ಯಾಂಕ್ ಯಾವುದೇ ನಷ್ಟ ಕಂಡಿಲ್ಲ. ನೂತನ ಯೋಜನೆಗಳ ಮೂಲಕ ಬ್ಯಾಂಕ್ ತನ್ನ ಗ್ರಾಹಕರಿಗೆ ಇನ್ನಷ್ಟು ಹತ್ತಿರವಾಗಿದೆ. ಜನರ ಸ್ಪಂದನೆಯನ್ನು ಆಧರಿಸಿ ಹೊಸ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ಬ್ಯಾಂಕಿಂಗ್ ವ್ಯವಸ್ಥೆ ವೇಗ ಪಡೆಯುತ್ತಿದೆ. ಬೆಂಗಳೂರಿನಲ್ಲಿಯೂ ಎರಡು ಶಾಖೆಗಳು ಆರಂಭಗೊಳ್ಳುತ್ತಿದ್ದು, ಈ ಮೂಲಕ ಬ್ಯಾಂಕ್ 827 ಶಾಖೆಗಳನ್ನು ಹೊಂದಲಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>