<p><strong>ನವದೆಹಲಿ</strong>: 2024–25ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಭಾರತ ಸಂಚಾರ ನಿಗಮ ಲಿಮಿಟೆಡ್ (ಬಿಎಸ್ಎನ್ಎಲ್), ₹280 ಕೋಟಿ ನಿವ್ವಳ ಲಾಭ ಗಳಿಸಿದೆ. 2007ರ ಬಳಿಕ ಸತತ ಎರಡು ತ್ರೈಮಾಸಿಕಗಳಲ್ಲಿ ಲಾಭ ದಾಖಲಿಸಿದೆ. </p>.<p>2023–24ನೇ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ₹849 ಕೋಟಿ ನಷ್ಟ ದಾಖಲಿಸಿತ್ತು.</p>.<p>ಡಿಸೆಂಬರ್ ತ್ರೈಮಾಸಿಕದಲ್ಲಿ ₹262 ಕೋಟಿ ಲಾಭ ಗಳಿಸಿತ್ತು. ಮಾರ್ಚ್ ತ್ರೈಮಾಸಿಕದಲ್ಲಿ ಲಾಭ ದಾಖಲಿಸಿದರೂ ಪೂರ್ಣ ಆರ್ಥಿಕ ವರ್ಷದಲ್ಲಿ ನಷ್ಟ ದಾಖಲಿಸಿದೆ. 2023–24ರಲ್ಲಿ ₹5,370 ಕೋಟಿ ನಷ್ಟ ದಾಖಲಿಸಿದ್ದರೆ, 2024–25ನೇ ಪೂರ್ಣ ಆರ್ಥಿಕ ವರ್ಷದಲ್ಲಿ ₹2,247 ಕೋಟಿ ನಷ್ಟ ಅನುಭವಿಸಿದೆ.</p>.<p>2023–24ರಲ್ಲಿ ₹19,330 ಕೋಟಿ ವರಮಾನ ಗಳಿಸಿತ್ತು. 2024–25ರಲ್ಲಿ ₹20,841 ಕೋಟಿ ವರಮಾನಗಳಿಸಿದೆ. ಒಟ್ಟಾರೆ ಶೇ 7.8ರಷ್ಟು ಹೆಚ್ಚಳವಾಗಿದೆ.</p>.<p class="bodytext">ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ದೂರಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ‘ಕಳೆದ 18 ವರ್ಷಗಳ ಅವಧಿಯಲ್ಲಿ ಸತತ ಎರಡು ತ್ರೈಮಾಸಿಕಗಳಲ್ಲಿ ನಿವ್ವಳ ಲಾಭ ದಾಖಲಿಸಿದೆ’ ಎಂದು ಹೇಳಿದ್ದಾರೆ.</p>.<p>‘ವೃತ್ತಿಪರ ನಿರ್ವಹಣೆಯ ಜೊತೆಗೆ ಸರ್ಕಾರ ಮತ್ತು ನೌಕರರ ಬೆಂಬಲದಿಂದ ಈ ಸುಧಾರಣೆ ಸಾಧ್ಯವಾಗಿದೆ. ಇದು ಬಿಎಸ್ಎಲ್ಎನ್ ಅನ್ನು ಪುನರುಜ್ಜೀವನಗೊಳಿಸುವುದಷ್ಟೇ ಅಲ್ಲದೆ ಅದನ್ನು ಮರು ವ್ಯಾಖ್ಯಾನಿಸುತ್ತದೆ’ ಎಂದು ಬಿಎಸ್ಎಲ್ಎನ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಬರ್ಟ್ ಜೆ. ರವಿ ಹೇಳಿದ್ದಾರೆ.</p>.<p>ವೆಚ್ಚ ನಿಯಂತ್ರಣ ಹಾಗೂ 4ಜಿ, 5ಜಿ ಸೇವೆ ಒದಗಿಸುವ ಮೂಲಕ ಸುಸ್ಥಿರ ಬೆಳವಣಿಗೆ ದಾಖಲಿಸುವ ವಿಶ್ವಾಸವಿದೆ. ಪ್ರತಿಯೊಬ್ಬ ಭಾರತೀಯನಿಗೂ ಕೈಗೆಟಕುವ ದರದಲ್ಲಿ ಗುಣಮಟ್ಟದ ಸಂಪರ್ಕ ಒದಗಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.</p>.<p>ನಾವು ಲಾಭದ ಹಿಂದೆ ಬೀಳುವುದಿಲ್ಲ. ಅದು ನಮ್ಮ ಅಂತಿಮ ಗುರಿಯೂ ಅಲ್ಲ. ಸಾರ್ವಜನಿಕರಿಗೆ ಗುಣಮಟ್ಟದ ದೂರಸಂಪರ್ಕ ಸೇವೆ ಒದಗಿಸುವುದಷ್ಟೇ ನಮ್ಮ ಆದ್ಯತೆ. ಉತ್ತಮ ಸೇವೆ ನೀಡಿದರೆ ಲಾಭ ತಾನಾಗಿಯೇ ಲಭಿಸುತ್ತದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 2024–25ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಭಾರತ ಸಂಚಾರ ನಿಗಮ ಲಿಮಿಟೆಡ್ (ಬಿಎಸ್ಎನ್ಎಲ್), ₹280 ಕೋಟಿ ನಿವ್ವಳ ಲಾಭ ಗಳಿಸಿದೆ. 2007ರ ಬಳಿಕ ಸತತ ಎರಡು ತ್ರೈಮಾಸಿಕಗಳಲ್ಲಿ ಲಾಭ ದಾಖಲಿಸಿದೆ. </p>.<p>2023–24ನೇ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ₹849 ಕೋಟಿ ನಷ್ಟ ದಾಖಲಿಸಿತ್ತು.</p>.<p>ಡಿಸೆಂಬರ್ ತ್ರೈಮಾಸಿಕದಲ್ಲಿ ₹262 ಕೋಟಿ ಲಾಭ ಗಳಿಸಿತ್ತು. ಮಾರ್ಚ್ ತ್ರೈಮಾಸಿಕದಲ್ಲಿ ಲಾಭ ದಾಖಲಿಸಿದರೂ ಪೂರ್ಣ ಆರ್ಥಿಕ ವರ್ಷದಲ್ಲಿ ನಷ್ಟ ದಾಖಲಿಸಿದೆ. 2023–24ರಲ್ಲಿ ₹5,370 ಕೋಟಿ ನಷ್ಟ ದಾಖಲಿಸಿದ್ದರೆ, 2024–25ನೇ ಪೂರ್ಣ ಆರ್ಥಿಕ ವರ್ಷದಲ್ಲಿ ₹2,247 ಕೋಟಿ ನಷ್ಟ ಅನುಭವಿಸಿದೆ.</p>.<p>2023–24ರಲ್ಲಿ ₹19,330 ಕೋಟಿ ವರಮಾನ ಗಳಿಸಿತ್ತು. 2024–25ರಲ್ಲಿ ₹20,841 ಕೋಟಿ ವರಮಾನಗಳಿಸಿದೆ. ಒಟ್ಟಾರೆ ಶೇ 7.8ರಷ್ಟು ಹೆಚ್ಚಳವಾಗಿದೆ.</p>.<p class="bodytext">ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ದೂರಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ‘ಕಳೆದ 18 ವರ್ಷಗಳ ಅವಧಿಯಲ್ಲಿ ಸತತ ಎರಡು ತ್ರೈಮಾಸಿಕಗಳಲ್ಲಿ ನಿವ್ವಳ ಲಾಭ ದಾಖಲಿಸಿದೆ’ ಎಂದು ಹೇಳಿದ್ದಾರೆ.</p>.<p>‘ವೃತ್ತಿಪರ ನಿರ್ವಹಣೆಯ ಜೊತೆಗೆ ಸರ್ಕಾರ ಮತ್ತು ನೌಕರರ ಬೆಂಬಲದಿಂದ ಈ ಸುಧಾರಣೆ ಸಾಧ್ಯವಾಗಿದೆ. ಇದು ಬಿಎಸ್ಎಲ್ಎನ್ ಅನ್ನು ಪುನರುಜ್ಜೀವನಗೊಳಿಸುವುದಷ್ಟೇ ಅಲ್ಲದೆ ಅದನ್ನು ಮರು ವ್ಯಾಖ್ಯಾನಿಸುತ್ತದೆ’ ಎಂದು ಬಿಎಸ್ಎಲ್ಎನ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಬರ್ಟ್ ಜೆ. ರವಿ ಹೇಳಿದ್ದಾರೆ.</p>.<p>ವೆಚ್ಚ ನಿಯಂತ್ರಣ ಹಾಗೂ 4ಜಿ, 5ಜಿ ಸೇವೆ ಒದಗಿಸುವ ಮೂಲಕ ಸುಸ್ಥಿರ ಬೆಳವಣಿಗೆ ದಾಖಲಿಸುವ ವಿಶ್ವಾಸವಿದೆ. ಪ್ರತಿಯೊಬ್ಬ ಭಾರತೀಯನಿಗೂ ಕೈಗೆಟಕುವ ದರದಲ್ಲಿ ಗುಣಮಟ್ಟದ ಸಂಪರ್ಕ ಒದಗಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.</p>.<p>ನಾವು ಲಾಭದ ಹಿಂದೆ ಬೀಳುವುದಿಲ್ಲ. ಅದು ನಮ್ಮ ಅಂತಿಮ ಗುರಿಯೂ ಅಲ್ಲ. ಸಾರ್ವಜನಿಕರಿಗೆ ಗುಣಮಟ್ಟದ ದೂರಸಂಪರ್ಕ ಸೇವೆ ಒದಗಿಸುವುದಷ್ಟೇ ನಮ್ಮ ಆದ್ಯತೆ. ಉತ್ತಮ ಸೇವೆ ನೀಡಿದರೆ ಲಾಭ ತಾನಾಗಿಯೇ ಲಭಿಸುತ್ತದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>