<p><strong>ನವದೆಹಲಿ</strong>: ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ ಲಿಮಿಟೆಡ್ನ (ಬಿಎಸ್ಎನ್ಎಲ್) ವರಮಾನವು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹5,347 ಕೋಟಿಯಷ್ಟು ಆಗಿದೆ ಎಂದು ಕೇಂದ್ರ ದೂರಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.</p>.<p>ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹5,740 ಕೋಟಿ ವರಮಾನ ಗಳಿಸುವ ಅಂದಾಜು ಮಾಡಲಾಗಿತ್ತು. ಈ ಪೈಕಿ ₹5,347 ಕೋಟಿ ಗಳಿಸಲಾಗಿದ್ದು, ಒಟ್ಟು ಗುರಿಯ ಶೇ 93ರಷ್ಟು ಸಾಧಿಸಲಾಗಿದೆ ಎಂದು ಗುರುವಾರ ತಿಳಿಸಿದ್ದಾರೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ನಿಗಮದ ವರಮಾನವು ₹11,134 ಕೋಟಿ ಆಗಿದೆ.</p>.<p>ಪ್ರಸಕ್ತ ಜೂನ್ ತ್ರೈಮಾಸಿಕದಲ್ಲಿ ಬಿಎಸ್ಎನ್ಎಲ್, ತನ್ನ ಪ್ರತಿ ಗ್ರಾಹಕನಿಂದ ತಿಂಗಳೊಂದರಲ್ಲಿ ಪಡೆಯುತ್ತಿರುವ ಸರಾಸರಿ ವರಮಾನವು (ಎಆರ್ಪಿಯು) ₹81 ಇತ್ತು. ಅದು ಸೆಪ್ಟೆಂಬರ್ ತ್ರೈಮಾಸಿದಲ್ಲಿ ₹91ಕ್ಕೆ ಏರಿಕೆ ಆಗಿದ್ದು, ಶೇ 12ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ. </p>.<p>ಮಹಾರಾಷ್ಟ್ರ, ಕೇರಳ, ಉತ್ತರ ಪ್ರದೇಶ (ಪೂರ್ವ), ಅಂಡಮಾನ್ ಮತ್ತು ನಿಕೋಬಾರ್, ಜಮ್ಮು ಮತ್ತು ಕಾಶ್ಮೀರದ ವಲಯದಲ್ಲಿ ಎಆರ್ಪಿಯು ಅತ್ಯಧಿಕ ₹214 ಇದೆ. ಆದರೆ, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಕೋಲ್ಕತ್ತದ ವಲಯದಲ್ಲಿ ₹60 ಇದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ ಲಿಮಿಟೆಡ್ನ (ಬಿಎಸ್ಎನ್ಎಲ್) ವರಮಾನವು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹5,347 ಕೋಟಿಯಷ್ಟು ಆಗಿದೆ ಎಂದು ಕೇಂದ್ರ ದೂರಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.</p>.<p>ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹5,740 ಕೋಟಿ ವರಮಾನ ಗಳಿಸುವ ಅಂದಾಜು ಮಾಡಲಾಗಿತ್ತು. ಈ ಪೈಕಿ ₹5,347 ಕೋಟಿ ಗಳಿಸಲಾಗಿದ್ದು, ಒಟ್ಟು ಗುರಿಯ ಶೇ 93ರಷ್ಟು ಸಾಧಿಸಲಾಗಿದೆ ಎಂದು ಗುರುವಾರ ತಿಳಿಸಿದ್ದಾರೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ನಿಗಮದ ವರಮಾನವು ₹11,134 ಕೋಟಿ ಆಗಿದೆ.</p>.<p>ಪ್ರಸಕ್ತ ಜೂನ್ ತ್ರೈಮಾಸಿಕದಲ್ಲಿ ಬಿಎಸ್ಎನ್ಎಲ್, ತನ್ನ ಪ್ರತಿ ಗ್ರಾಹಕನಿಂದ ತಿಂಗಳೊಂದರಲ್ಲಿ ಪಡೆಯುತ್ತಿರುವ ಸರಾಸರಿ ವರಮಾನವು (ಎಆರ್ಪಿಯು) ₹81 ಇತ್ತು. ಅದು ಸೆಪ್ಟೆಂಬರ್ ತ್ರೈಮಾಸಿದಲ್ಲಿ ₹91ಕ್ಕೆ ಏರಿಕೆ ಆಗಿದ್ದು, ಶೇ 12ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ. </p>.<p>ಮಹಾರಾಷ್ಟ್ರ, ಕೇರಳ, ಉತ್ತರ ಪ್ರದೇಶ (ಪೂರ್ವ), ಅಂಡಮಾನ್ ಮತ್ತು ನಿಕೋಬಾರ್, ಜಮ್ಮು ಮತ್ತು ಕಾಶ್ಮೀರದ ವಲಯದಲ್ಲಿ ಎಆರ್ಪಿಯು ಅತ್ಯಧಿಕ ₹214 ಇದೆ. ಆದರೆ, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಕೋಲ್ಕತ್ತದ ವಲಯದಲ್ಲಿ ₹60 ಇದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>