ಕಂಪನಿಯಲ್ಲಿ ಶೇ 32ರಷ್ಟು ಷೇರು ಹೊಂದಿರುವ ಹೂಡಿಕೆದಾರರು ಕರೆದಿರುವ ಈ ಸಭೆಯ ಸಿಂಧುತ್ವ ಪ್ರಶ್ನಿಸಿ ರವೀಂದ್ರನ್ ಅವರು ಕರ್ನಾಟಕ ಹೈಕೋರ್ಟ್ನ ಮೆಟ್ಟಿಲೇರಿದ್ದಾರೆ. ಆದರೆ, ಈ ಸಭೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು, ಮಾರ್ಚ್ 13ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಹಾಗಾಗಿ, ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಂಡರೂ ವಿಚಾರಣಾ ಅವಧಿವರೆಗೂ ಅದು ಅನ್ವಯಿಸುವುದಿಲ್ಲ ಎನ್ನಲಾಗಿದೆ.