ತಿದ್ದುಪಡಿ ಮಸೂದೆಯನ್ನು ಸಂಸತ್ತಿನ ಹಾಲಿ ಅಧಿವೇಶನದಲ್ಲೇ ಮಂಡಿಸುವ ಸಾಧ್ಯತೆ ಇದೆ ಎಂದು ನಿರ್ಮಲಾ ಅವರು ತಿಳಿಸಿದರು. ಇದು ಕಾಯ್ದೆಯಾದ ನಂತರ, ಪಿಎಂಸಿ ಬ್ಯಾಂಕ್ ಹಾಗೂ ಅದರಂತಹ ಇತರ ಬ್ಯಾಂಕ್ಗಳಲ್ಲಿ ಠೇವಣಿ ಇರಿಸಿದವರಿಗೆ ನೆರವು ಸಿಗಲಿದೆ. ಈಗಿರುವ ನಿಯಮಗಳ ಅನ್ವಯ, ಬ್ಯಾಂಕ್ನ ಪರವಾನಗಿ ರದ್ದಾಗಿ, ಬ್ಯಾಂಕಿಂಗ್ ಕಂಪನಿಯನ್ನು ಪರಿಸಮಾಪ್ತಿಗೊಳಿಸಿ, ಅದರ ಆಸ್ತಿಗಳನ್ನು ಹಕ್ಕುದಾರರಿಗೆ ವರ್ಗಾಯಿಸುವ ಪ್ರಕ್ರಿಯೆ ಶುರುವಾದ ನಂತರ ವಿಮಾ ಪರಿಹಾರ ಮೊತ್ತವು ಸಿಗುತ್ತದೆ.