ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ಪರಿಹಾರ ಪ್ಯಾಕೇಜ್, ಬಾಕಿ ಪಾವತಿಗೆ ಗಡುವು; ಟೆಲಿಕಾಂ ಕಂಪನಿಗಳು ನಿರಾಳ?

Last Updated 15 ಸೆಪ್ಟೆಂಬರ್ 2021, 16:47 IST
ಅಕ್ಷರ ಗಾತ್ರ

ನವದೆಹಲಿ: ಸಾಲದ ಸುಳಿಯಲ್ಲಿ ಸಿಲುಕಿರುವ ದೂರಸಂಪರ್ಕ ಕ್ಷೇತ್ರದ ಕಂಪನಿಗಳಿಗೆ ಕೇಂದ್ರ ಸಚಿವ ಸಂಪುಟದ ನಿರ್ಧಾರ ನಿರಾಳ ತರಬಹುದಾಗಿದೆ. ಟೆಲಿಕಾಂ ಕಂಪನಿಗಳಿಗೆ ಪರಿಹಾರ ಪ್ಯಾಕೇಜ್‌ ಘೋಷಣೆಯ ಸಂಬಂಧ ಕೇಂದ್ರ ಸಚಿವ ಸಂಪುಟದ ಅನುಮೋದನೆ ದೊರೆತಿರುವುದಾಗಿ ವರದಿಯಾಗಿದೆ.

ಹೊಂದಾಣಿಕೆ ಮಾಡಿದ ಒಟ್ಟು ಆದಾಯ (ಎಜಿಆರ್‌) ರೂಪದಲ್ಲಿ ಸರ್ಕಾರಕ್ಕೆ ಟೆಲಿಕಾಂ ಕಂಪನಿಗಳು ಸಾವಿರಾರು ಕೋಟಿ ರೂಪಾಯಿ ಪಾವತಿ ಬಾಕಿ ಉಳಿಸಿಕೊಂಡಿವೆ. ದೂರಸಂಪರ್ಕ ಕ್ಷೇತ್ರದ ಸುಧಾರಣೆಗಾಗಿ ಬಾಕಿ ಮೊತ್ತ ಪಾವತಿಯಿಂದ ತಾತ್ಕಾಲಿಕ ಬಿಡುವು (ಮರುಪಾವತಿಗೆ ಗಡುವು), ಎಜಿಆರ್‌ ವ್ಯಾಖ್ಯಾನದ ಮರುಪರಿಶೀಲನೆ ಹಾಗೂ ತರಂಗಾಂತರ ಬಳಕೆ ಶುಲ್ಕದಲ್ಲಿ ಕಡಿತ ಮಾಡುವಂತಹ ಕ್ರಮಗಳನ್ನು ಕೈಗೊಳ್ಳುವ ಪ್ರಸ್ತಾಪ ಸಲ್ಲಿಕೆಯಾಗಿತ್ತು.

ದೂರಸಂಪರ್ಕ ಸಚಿವ ಅಶ್ವಿನಿವೈಷ್ಣವ್‌ ಅವರು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ವಿವರಿಸುತ್ತಿದ್ದಾರೆ.

ವೊಡಾಫೋನ್‌ ಐಡಿಯಾ ಲಿಮಿಟೆಡ್‌(ವಿಐಎಲ್‌) ಸರ್ಕಾರಕ್ಕೆ ₹ 50,399 ಕೋಟಿ ಪಾವತಿಸುವುದು ಬಾಕಿ ಇದೆ. ಸರ್ಕಾರದ ಪರಿಹಾರ ಪ್ಯಾಕೇಜ್‌ ವಿಐಎಲ್‌ ಸೇರಿದಂತೆ ಮೂರು ಖಾಸಗಿ ಕಂಪನಿಗಳಿಗೆ ಚೇತರಿಕೆ ನೀಡುವ ಸಾಧ್ಯತೆ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT