<p><strong>ನವದೆಹಲಿ</strong>: ಮುಂಗಾರು ಅವಧಿಗೆ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪಿ ಆ್ಯಂಡ್ ಕೆ (ಫಾಸ್ಪೆಟಿಕ್ ಮತ್ತು ಪೊಟ್ಯಾಸಿಕ್) ರಸಗೊಬ್ಬರಕ್ಕೆ ಸಬ್ಸಿಡಿ ಮುಂದುವರಿಸಲು ₹37,216 ಕೋಟಿ ಅನುದಾನಕ್ಕೆ ಕೇಂದ್ರ ಸಚಿವ ಸಂಪುಟ ಸಭೆಯು ಶುಕ್ರವಾರ ಒಪ್ಪಿಗೆ ನೀಡಿದೆ.</p><p>ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಂವಹನ ಸಚಿವ ಅಶ್ವಿನಿ ವೈಷ್ಣವ್, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಸಗೊಬ್ಬರದ ಸಹಾಯಧನ ವಿಸ್ತರಣೆಗೆ (ಏಪ್ರಿಲ್ 1ರಿಂದ ಸೆಪ್ಟೆಂಬರ್ 30ರ ವರೆಗೆ) ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.</p><p>ಇದರಿಂದ ರೈತರಿಗೆ ಕೈಗಟಗುವ ಬೆಲೆಯಲ್ಲಿ ರಸಗೊಬ್ಬರ ದೊರೆಯಲಿದೆ. ಡಿಎಪಿ ರಸಗೊಬ್ಬರದ ಬೆಲೆ ಏರಿಕೆ ಮಾಡುವುದಿಲ್ಲ ಎಂದರು.</p><p>ಎಲೆಕ್ಟ್ರಾನಿಕ್ ಬಿಡಿಭಾಗಗಳ ತಯಾರಿಕಾ ಯೋಜನೆ: ಎಲೆಕ್ಟ್ರಾನಿಕ್ ಬಿಡಿಭಾಗಗಳ ತಯಾರಿಕೆಯಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ₹22,919 ಕೋಟಿ ಯೋಜನೆಗೆ ಸಭೆಯು ಅನುಮೋದನೆ ನೀಡಿದೆ.</p><p>ಈ ವಲಯದಲ್ಲಿ ಜಾಗತಿಕ ಮತ್ತು ದೇಶೀಯವಾಗಿ ಬಂಡವಾಳ ಆಕರ್ಷಿಸಲು ಎಲೆಕ್ಟ್ರಾನಿಕ್ ಬಿಡಿಭಾಗಗಳ ತಯಾರಿಕಾ ಯೋಜನೆಗೆ ಒಪ್ಪಿಗೆ ನೀಡಿದೆ.</p><p>‘ಈ ಯೋಜನೆಯಡಿ ₹59,350 ಕೋಟಿ ಬಂಡವಾಳವನ್ನು ನಿರೀಕ್ಷಿಸಲಾಗಿದೆ. ಜೊತೆಗೆ, 91,600 ಉದ್ಯೋಗಗಳು ಸೃಷ್ಟಿಯಾಗಲಿವೆ’ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮುಂಗಾರು ಅವಧಿಗೆ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪಿ ಆ್ಯಂಡ್ ಕೆ (ಫಾಸ್ಪೆಟಿಕ್ ಮತ್ತು ಪೊಟ್ಯಾಸಿಕ್) ರಸಗೊಬ್ಬರಕ್ಕೆ ಸಬ್ಸಿಡಿ ಮುಂದುವರಿಸಲು ₹37,216 ಕೋಟಿ ಅನುದಾನಕ್ಕೆ ಕೇಂದ್ರ ಸಚಿವ ಸಂಪುಟ ಸಭೆಯು ಶುಕ್ರವಾರ ಒಪ್ಪಿಗೆ ನೀಡಿದೆ.</p><p>ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಂವಹನ ಸಚಿವ ಅಶ್ವಿನಿ ವೈಷ್ಣವ್, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಸಗೊಬ್ಬರದ ಸಹಾಯಧನ ವಿಸ್ತರಣೆಗೆ (ಏಪ್ರಿಲ್ 1ರಿಂದ ಸೆಪ್ಟೆಂಬರ್ 30ರ ವರೆಗೆ) ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.</p><p>ಇದರಿಂದ ರೈತರಿಗೆ ಕೈಗಟಗುವ ಬೆಲೆಯಲ್ಲಿ ರಸಗೊಬ್ಬರ ದೊರೆಯಲಿದೆ. ಡಿಎಪಿ ರಸಗೊಬ್ಬರದ ಬೆಲೆ ಏರಿಕೆ ಮಾಡುವುದಿಲ್ಲ ಎಂದರು.</p><p>ಎಲೆಕ್ಟ್ರಾನಿಕ್ ಬಿಡಿಭಾಗಗಳ ತಯಾರಿಕಾ ಯೋಜನೆ: ಎಲೆಕ್ಟ್ರಾನಿಕ್ ಬಿಡಿಭಾಗಗಳ ತಯಾರಿಕೆಯಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ₹22,919 ಕೋಟಿ ಯೋಜನೆಗೆ ಸಭೆಯು ಅನುಮೋದನೆ ನೀಡಿದೆ.</p><p>ಈ ವಲಯದಲ್ಲಿ ಜಾಗತಿಕ ಮತ್ತು ದೇಶೀಯವಾಗಿ ಬಂಡವಾಳ ಆಕರ್ಷಿಸಲು ಎಲೆಕ್ಟ್ರಾನಿಕ್ ಬಿಡಿಭಾಗಗಳ ತಯಾರಿಕಾ ಯೋಜನೆಗೆ ಒಪ್ಪಿಗೆ ನೀಡಿದೆ.</p><p>‘ಈ ಯೋಜನೆಯಡಿ ₹59,350 ಕೋಟಿ ಬಂಡವಾಳವನ್ನು ನಿರೀಕ್ಷಿಸಲಾಗಿದೆ. ಜೊತೆಗೆ, 91,600 ಉದ್ಯೋಗಗಳು ಸೃಷ್ಟಿಯಾಗಲಿವೆ’ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>