<p><strong>ಬೆಂಗಳೂರು</strong>: ಭಾರಿ ಮಳೆಯಿಂದ ಭೂಕುಸಿತ ಸಂಭವಿಸಿ ತೊಂದರೆಗೆ ಸಿಲುಕಿರುವ ಕೇರಳದ ವಯನಾಡ್ ಜಿಲ್ಲೆಯ ಸಂತ್ರಸ್ತರಿಗೆ ನೆರವು ಮತ್ತು ಪುನರ್ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್, ಕೇರಳದ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹1 ಕೋಟಿ ದೇಣಿಗೆ ನೀಡಿದೆ.</p>.<p>ಬ್ಯಾಂಕ್ನ ತಿರುವನಂತಪುರಂ ವಲಯದ ಮುಖ್ಯಸ್ಥ ಹಾಗೂ ಪ್ರಧಾನ ವ್ಯವಸ್ಥಾಪಕ ಪ್ರದೀಪ್ ಕೆ.ಎಸ್. ಅವರು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಡಿ.ಡಿ ಯನ್ನು ಹಸ್ತಾಂತರಿಸಿದರು.</p>.<p>ಬ್ಯಾಂಕ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್ಆರ್) ಮುಖ್ಯಮಂತ್ರಿ ಪರಿಹಾರ ನಿಧಿಗೆ ಈ ದೇಣಿಗೆ ನೀಡಲಾಗಿದೆ ಎಂದು ಬ್ಯಾಂಕ್ ತಿಳಿಸಿದೆ.</p>.<p>‘ವಯನಾಡ್ ಘಟನೆಯು ಹೃದಯ ಹಿಂಡುವಂತದ್ದು. ಸಂತ್ರಸ್ತರಿಗೆ ಹೆಚ್ಚಿನ ಸಹಾಯ ಮಾಡಲು ಸಿದ್ಧರಿದ್ದೇವೆ. ನಾಗರಿಕರು ಮತ್ತು ಇತರೆ ಸಂಸ್ಥೆಗಳು ಸಹ ನೆರವು ನೀಡಲು ಮುಂದಾಗಬೇಕು’ ಎಂದು ಕೆನರಾ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಕೆ. ಸತ್ಯನಾರಾಯಣ ರಾಜು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಭಾರಿ ಮಳೆಯಿಂದ ಭೂಕುಸಿತ ಸಂಭವಿಸಿ ತೊಂದರೆಗೆ ಸಿಲುಕಿರುವ ಕೇರಳದ ವಯನಾಡ್ ಜಿಲ್ಲೆಯ ಸಂತ್ರಸ್ತರಿಗೆ ನೆರವು ಮತ್ತು ಪುನರ್ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್, ಕೇರಳದ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹1 ಕೋಟಿ ದೇಣಿಗೆ ನೀಡಿದೆ.</p>.<p>ಬ್ಯಾಂಕ್ನ ತಿರುವನಂತಪುರಂ ವಲಯದ ಮುಖ್ಯಸ್ಥ ಹಾಗೂ ಪ್ರಧಾನ ವ್ಯವಸ್ಥಾಪಕ ಪ್ರದೀಪ್ ಕೆ.ಎಸ್. ಅವರು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಡಿ.ಡಿ ಯನ್ನು ಹಸ್ತಾಂತರಿಸಿದರು.</p>.<p>ಬ್ಯಾಂಕ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್ಆರ್) ಮುಖ್ಯಮಂತ್ರಿ ಪರಿಹಾರ ನಿಧಿಗೆ ಈ ದೇಣಿಗೆ ನೀಡಲಾಗಿದೆ ಎಂದು ಬ್ಯಾಂಕ್ ತಿಳಿಸಿದೆ.</p>.<p>‘ವಯನಾಡ್ ಘಟನೆಯು ಹೃದಯ ಹಿಂಡುವಂತದ್ದು. ಸಂತ್ರಸ್ತರಿಗೆ ಹೆಚ್ಚಿನ ಸಹಾಯ ಮಾಡಲು ಸಿದ್ಧರಿದ್ದೇವೆ. ನಾಗರಿಕರು ಮತ್ತು ಇತರೆ ಸಂಸ್ಥೆಗಳು ಸಹ ನೆರವು ನೀಡಲು ಮುಂದಾಗಬೇಕು’ ಎಂದು ಕೆನರಾ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಕೆ. ಸತ್ಯನಾರಾಯಣ ರಾಜು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>