<p><strong>ಬೆಂಗಳೂರು</strong>: ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್ ತನ್ನ ಗ್ರಾಹಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲು ಹೊಸ ಯೋಜನೆಗಳನ್ನು ಪ್ರಕಟಿಸಿದೆ.</p>.<p>ನಗರದಲ್ಲಿರುವ ಬ್ಯಾಂಕ್ನ ಪ್ರಧಾನ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಆರೋಗ್ಯಕ್ಕೆ ಮೀಸಲಾದ ಕೆನರಾ ಹೀಲ್ ಸಾಲ, ಕೆನರಾ ಏಂಜೆಲ್, ಕ್ಯಾನ್ಸರ್ ಕೇರ್ ಪಾಲಿಸಿ, ವೈಯಕ್ತಿಕ ಸಾಲ, ಕೆನರಾ ರೆಡಿಕ್ಯಾಶ್ ಸೇರಿದಂತೆ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಾಯಿತು.</p>.<p>ಜೊತೆಗೆ ಬಳಕೆದಾರರಿಗೆ ಕೆನರಾ ಯುಪಿಐ ಸೇವೆ, ಸಿಬ್ಬಂದಿಗೆ ಎಚ್ಆರ್ಎಂಎಸ್ ಮೊಬೈಲ್ ಅಪ್ಲಿಕೇಷನ್ ಅನ್ನು ಅನಾವರಣಗೊಳಿಸಲಾಯಿತು.</p>.<p>ರಿಸರ್ವ್ ಬ್ಯಾಂಕ್ನ ಇನ್ನೋವೇಷನ್ ಹಬ್ನ ಸಿಇಒ ರಾಜೇಶ್ ಬನ್ಸಾಲ್ ಅವರು ‘ಕೆನರಾ ಎಸ್ಎಚ್ಜಿ ಇ-ಮನಿ’ ಹೆಸರಿನ ಡಿಜಿಟಲ್ ಎಸ್ಎಚ್ಜಿ ಯೋಜನೆಗೆ ಚಾಲನೆ ನೀಡಿದರು. ಈ ಕುರಿತ ಪತ್ರವನ್ನು ಕೆನರಾ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಕೆ. ಸತ್ಯನಾರಾಯಣ ರಾಜು ಅವರೊಂದಿಗೆ ವಿನಿಮಯ ಮಾಡಿಕೊಂಡರು.</p>.<p>ಕಾರ್ಯಕ್ರಮದಲ್ಲಿ ಬ್ಯಾಂಕ್ನ ಕಾರ್ಯ ನಿರ್ವಾಹಕ ನಿರ್ದೇಶಕರಾದ ದೇಬಶಿಶ್ ಮುಖರ್ಜಿ, ಅಶೋಕ್ ಚಂದ್ರ, ಹರ್ದೀಪ್ ಸಿಂಗ್ ಅಹ್ಲುವಾಲಿಯಾ, ಭವೇಂದ್ರ ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್ ತನ್ನ ಗ್ರಾಹಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲು ಹೊಸ ಯೋಜನೆಗಳನ್ನು ಪ್ರಕಟಿಸಿದೆ.</p>.<p>ನಗರದಲ್ಲಿರುವ ಬ್ಯಾಂಕ್ನ ಪ್ರಧಾನ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಆರೋಗ್ಯಕ್ಕೆ ಮೀಸಲಾದ ಕೆನರಾ ಹೀಲ್ ಸಾಲ, ಕೆನರಾ ಏಂಜೆಲ್, ಕ್ಯಾನ್ಸರ್ ಕೇರ್ ಪಾಲಿಸಿ, ವೈಯಕ್ತಿಕ ಸಾಲ, ಕೆನರಾ ರೆಡಿಕ್ಯಾಶ್ ಸೇರಿದಂತೆ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಾಯಿತು.</p>.<p>ಜೊತೆಗೆ ಬಳಕೆದಾರರಿಗೆ ಕೆನರಾ ಯುಪಿಐ ಸೇವೆ, ಸಿಬ್ಬಂದಿಗೆ ಎಚ್ಆರ್ಎಂಎಸ್ ಮೊಬೈಲ್ ಅಪ್ಲಿಕೇಷನ್ ಅನ್ನು ಅನಾವರಣಗೊಳಿಸಲಾಯಿತು.</p>.<p>ರಿಸರ್ವ್ ಬ್ಯಾಂಕ್ನ ಇನ್ನೋವೇಷನ್ ಹಬ್ನ ಸಿಇಒ ರಾಜೇಶ್ ಬನ್ಸಾಲ್ ಅವರು ‘ಕೆನರಾ ಎಸ್ಎಚ್ಜಿ ಇ-ಮನಿ’ ಹೆಸರಿನ ಡಿಜಿಟಲ್ ಎಸ್ಎಚ್ಜಿ ಯೋಜನೆಗೆ ಚಾಲನೆ ನೀಡಿದರು. ಈ ಕುರಿತ ಪತ್ರವನ್ನು ಕೆನರಾ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಕೆ. ಸತ್ಯನಾರಾಯಣ ರಾಜು ಅವರೊಂದಿಗೆ ವಿನಿಮಯ ಮಾಡಿಕೊಂಡರು.</p>.<p>ಕಾರ್ಯಕ್ರಮದಲ್ಲಿ ಬ್ಯಾಂಕ್ನ ಕಾರ್ಯ ನಿರ್ವಾಹಕ ನಿರ್ದೇಶಕರಾದ ದೇಬಶಿಶ್ ಮುಖರ್ಜಿ, ಅಶೋಕ್ ಚಂದ್ರ, ಹರ್ದೀಪ್ ಸಿಂಗ್ ಅಹ್ಲುವಾಲಿಯಾ, ಭವೇಂದ್ರ ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>