<p><strong>ನವದೆಹಲಿ</strong>: ‘ಬ್ಯಾಂಕ್ಗಳಲ್ಲಿ ನಗದು ಕೊರತೆ ಇಲ್ಲ. ಆದರೆ, ಕೊರೊನಾದಿಂದಾಗಿ ಖಾಸಗಿ ವಲಯದಿಂದ ಸಾಲಕ್ಕೆ ಬೇಡಿಕೆಯೇ ಇಲ್ಲದಂತಾಗಿದೆ’ ಎಂದು ಎಸ್ಬಿಐನ ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ಸುಜಿತ್ ವರ್ಮಾ ತಿಳಿಸಿದ್ದಾರೆ.</p>.<p>‘ಸದ್ಯದ ಪರಿಸ್ಥಿತಿಯಲ್ಲಿ ಬ್ಯಾಂಕ್ಗಳು ಬಹಳ ಎಚ್ಚರಿಕೆಯಿಂದ ಸಾಲ ನೀಡುವ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ವಿವೇಚನಾರಹಿತವಾಗಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ’ ಎಂದು ಪಿಎಚ್ಡಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಆಯೋಜಿಸಿದ್ದ ವೆಬಿನಾರ್ನಲ್ಲಿ ಅವರು ಹೇಳಿದ್ದಾರೆ.</p>.<p>‘ಎಲ್ಲೆಲ್ಲಿ ಹಣಕಾಸಿನ ಅಗತ್ಯವಿದೆಯೋ ಅಲ್ಲಿ ನೆರವಾಗಲು ನಾವು ಸಿದ್ಧರಿದ್ದೇವೆ. ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಎಸ್ಬಿಐ, ವಿವಿಧ ಉದ್ದಿಮೆಗಳು ಮತ್ತು ಒಟ್ಟಾರೆ ಆರ್ಥಿಕತೆಗೆ ನೆರವಾಗಲು ಸಂಪೂರ್ಣ ಬೆಂಬಲ ಮತ್ತು ಸಹಕಾರ ನೀಡಲಿದೆ.</p>.<p>'ಉದ್ಯಮದಲ್ಲಿ ಹೊಸ ಹೂಡಿಕೆಯ ಕೊರತೆ ಎದುರಾಗಿದೆ. ದುಡಿಯುವ ಬಂಡವಾಳದ ಹೊರತಾಗಿ ಕಂಪನಿಗಳು ಹೊಸ ಹೂಡಿಕೆಗಾಗಿ ಬ್ಯಾಂಕ್ಗಳನ್ನು ಸಂಪರ್ಕಿಸುತ್ತಿಲ್ಲ. ಆದರೆ, ಬ್ಯಾಂಕ್ಗಳ ಬಳಿ ಸಾಕಷ್ಟು ನಗದು ಲಭ್ಯವಿದೆ. ಹೀಗಾಗಿ,ಬ್ಯಾಂಕ್ಗಳು ಬಡ್ಡಿ ಗಳಿಸುವ ಉದ್ದೇಶದಿಂದ ಆರ್ಬಿಐನಲ್ಲಿ ₹ 6 ಲಕ್ಷದಿಂದ ₹ 7 ಲಕ್ಷದವರೆಗೆ ನಗದನ್ನು ಇಡುತ್ತಿವೆ’ ಎಂದು ಅವರು ವಿವರಿಸಿದ್ದಾರೆ.</p>.<p class="Subhead"><strong>ರೆಪೊ, ರಿವರ್ಸ್ ರೆಪೊ:</strong>ಬ್ಯಾಂಕ್ಗಳು ಆರ್ಬಿಐನಿಂದ ಪಡೆಯುವ ಸಾಲಕ್ಕೆ ವಿಧಿಸುವ ಬಡ್ಡಿದರಕ್ಕೆ ರೆಪೊ ದರ ಎಂದು ಕರೆಯಲಾಗುತ್ತದೆ.ಬ್ಯಾಂಕ್ಗಳು ಆರ್ಬಿಐನಲ್ಲಿ ಇಡುವ ಹಣಕ್ಕೆ ಪಡೆಯುವ ಬಡ್ಡಿದರಕ್ಕೆ ರಿವರ್ಸ್ ರೆಪೊ ಎಂದು ಕರೆಯಲಾಗುತ್ತದೆ.</p>.<p>‘ಒಟ್ಟಾರೆ ದೇಶದ ಬ್ಯಾಂಕಿಂಗ್ ವಲಯದ ದೃಷ್ಟಿಯಿಂದ ನೋಡುವುದಾದರೆ, ಈಗಿನ ಪರಿಸ್ಥಿತಿಯಲ್ಲಿ ನಾವು ಬಹಳ ಎಚ್ಚರಿಕೆಯಿಂದ ಸಾಲ ನೀಡಬೇಕು. ಸಾಲ ನೀಡದೇ ಇರಲು ಸಾಧ್ಯವೇ ಇಲ್ಲ. ಹಾಗೆಂದು ಆತುರದ ಅಥವಾ ವಿವೇಚನೆ ಇಲ್ಲದೇ ಸಾಲ ನೀಡುತ್ತೇವೆ ಎಂದು ನಿರೀಕ್ಷಿಸುವುದೂ ಸರಿಯಲ್ಲ’ ಎಂದು ಹೇಳಿದ್ದಾರೆ.</p>.<p>‘ಈಗಿನ ಪರಿಸ್ಥಿತಿಯು 2011–12ರ ಜಾಗತಿಕ ಆರ್ಥಿಕ ಬಿಕ್ಕಟ್ಟಿಗಿಂತಲೂ ಭಿನ್ನವಾಗಿದೆ. ಆಗ ಸರ್ಕಾರಗಳ ವಿತ್ತೀಯ ಉತ್ತೇಜನ ಕೊಡುಗೆಯ ಭಾಗವಾಗಿ ಬ್ಯಾಂಕ್ಗಳ ಸಾಲ ನೀಡಿಕೆಯು ಗಣನೀಯವಾಗಿ ಹೆಚ್ಚಾಗಿತ್ತು’ ಎಂದಿದ್ದಾರೆ.</p>.<p>ಸರ್ಕಾರ ಮತ್ತು ಆರ್ಬಿಐ ನೀಡಿರುವ ಪರಿಹಾರ ಕೊಡುಗೆಯ ಸದ್ಬಳಕೆ ಮಾಡಿಕೊಳ್ಳುವಂತೆ ಉದ್ದಿಮೆಗಳಿಗೆ ಅವರು ಸಲಹೆ ನೀಡಿದ್ದಾರೆ.</p>.<p>ವೆಚ್ಚ ಪರಿಶೀಲನೆ ನಡೆಸಿ ಅತಿ ಅಗತ್ಯವಲ್ಲದ ವೆಚ್ಚಗಳನ್ನು ಕಡಿತಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿದೆ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಬ್ಯಾಂಕ್ಗಳಲ್ಲಿ ನಗದು ಕೊರತೆ ಇಲ್ಲ. ಆದರೆ, ಕೊರೊನಾದಿಂದಾಗಿ ಖಾಸಗಿ ವಲಯದಿಂದ ಸಾಲಕ್ಕೆ ಬೇಡಿಕೆಯೇ ಇಲ್ಲದಂತಾಗಿದೆ’ ಎಂದು ಎಸ್ಬಿಐನ ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ಸುಜಿತ್ ವರ್ಮಾ ತಿಳಿಸಿದ್ದಾರೆ.</p>.<p>‘ಸದ್ಯದ ಪರಿಸ್ಥಿತಿಯಲ್ಲಿ ಬ್ಯಾಂಕ್ಗಳು ಬಹಳ ಎಚ್ಚರಿಕೆಯಿಂದ ಸಾಲ ನೀಡುವ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ವಿವೇಚನಾರಹಿತವಾಗಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ’ ಎಂದು ಪಿಎಚ್ಡಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಆಯೋಜಿಸಿದ್ದ ವೆಬಿನಾರ್ನಲ್ಲಿ ಅವರು ಹೇಳಿದ್ದಾರೆ.</p>.<p>‘ಎಲ್ಲೆಲ್ಲಿ ಹಣಕಾಸಿನ ಅಗತ್ಯವಿದೆಯೋ ಅಲ್ಲಿ ನೆರವಾಗಲು ನಾವು ಸಿದ್ಧರಿದ್ದೇವೆ. ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಎಸ್ಬಿಐ, ವಿವಿಧ ಉದ್ದಿಮೆಗಳು ಮತ್ತು ಒಟ್ಟಾರೆ ಆರ್ಥಿಕತೆಗೆ ನೆರವಾಗಲು ಸಂಪೂರ್ಣ ಬೆಂಬಲ ಮತ್ತು ಸಹಕಾರ ನೀಡಲಿದೆ.</p>.<p>'ಉದ್ಯಮದಲ್ಲಿ ಹೊಸ ಹೂಡಿಕೆಯ ಕೊರತೆ ಎದುರಾಗಿದೆ. ದುಡಿಯುವ ಬಂಡವಾಳದ ಹೊರತಾಗಿ ಕಂಪನಿಗಳು ಹೊಸ ಹೂಡಿಕೆಗಾಗಿ ಬ್ಯಾಂಕ್ಗಳನ್ನು ಸಂಪರ್ಕಿಸುತ್ತಿಲ್ಲ. ಆದರೆ, ಬ್ಯಾಂಕ್ಗಳ ಬಳಿ ಸಾಕಷ್ಟು ನಗದು ಲಭ್ಯವಿದೆ. ಹೀಗಾಗಿ,ಬ್ಯಾಂಕ್ಗಳು ಬಡ್ಡಿ ಗಳಿಸುವ ಉದ್ದೇಶದಿಂದ ಆರ್ಬಿಐನಲ್ಲಿ ₹ 6 ಲಕ್ಷದಿಂದ ₹ 7 ಲಕ್ಷದವರೆಗೆ ನಗದನ್ನು ಇಡುತ್ತಿವೆ’ ಎಂದು ಅವರು ವಿವರಿಸಿದ್ದಾರೆ.</p>.<p class="Subhead"><strong>ರೆಪೊ, ರಿವರ್ಸ್ ರೆಪೊ:</strong>ಬ್ಯಾಂಕ್ಗಳು ಆರ್ಬಿಐನಿಂದ ಪಡೆಯುವ ಸಾಲಕ್ಕೆ ವಿಧಿಸುವ ಬಡ್ಡಿದರಕ್ಕೆ ರೆಪೊ ದರ ಎಂದು ಕರೆಯಲಾಗುತ್ತದೆ.ಬ್ಯಾಂಕ್ಗಳು ಆರ್ಬಿಐನಲ್ಲಿ ಇಡುವ ಹಣಕ್ಕೆ ಪಡೆಯುವ ಬಡ್ಡಿದರಕ್ಕೆ ರಿವರ್ಸ್ ರೆಪೊ ಎಂದು ಕರೆಯಲಾಗುತ್ತದೆ.</p>.<p>‘ಒಟ್ಟಾರೆ ದೇಶದ ಬ್ಯಾಂಕಿಂಗ್ ವಲಯದ ದೃಷ್ಟಿಯಿಂದ ನೋಡುವುದಾದರೆ, ಈಗಿನ ಪರಿಸ್ಥಿತಿಯಲ್ಲಿ ನಾವು ಬಹಳ ಎಚ್ಚರಿಕೆಯಿಂದ ಸಾಲ ನೀಡಬೇಕು. ಸಾಲ ನೀಡದೇ ಇರಲು ಸಾಧ್ಯವೇ ಇಲ್ಲ. ಹಾಗೆಂದು ಆತುರದ ಅಥವಾ ವಿವೇಚನೆ ಇಲ್ಲದೇ ಸಾಲ ನೀಡುತ್ತೇವೆ ಎಂದು ನಿರೀಕ್ಷಿಸುವುದೂ ಸರಿಯಲ್ಲ’ ಎಂದು ಹೇಳಿದ್ದಾರೆ.</p>.<p>‘ಈಗಿನ ಪರಿಸ್ಥಿತಿಯು 2011–12ರ ಜಾಗತಿಕ ಆರ್ಥಿಕ ಬಿಕ್ಕಟ್ಟಿಗಿಂತಲೂ ಭಿನ್ನವಾಗಿದೆ. ಆಗ ಸರ್ಕಾರಗಳ ವಿತ್ತೀಯ ಉತ್ತೇಜನ ಕೊಡುಗೆಯ ಭಾಗವಾಗಿ ಬ್ಯಾಂಕ್ಗಳ ಸಾಲ ನೀಡಿಕೆಯು ಗಣನೀಯವಾಗಿ ಹೆಚ್ಚಾಗಿತ್ತು’ ಎಂದಿದ್ದಾರೆ.</p>.<p>ಸರ್ಕಾರ ಮತ್ತು ಆರ್ಬಿಐ ನೀಡಿರುವ ಪರಿಹಾರ ಕೊಡುಗೆಯ ಸದ್ಬಳಕೆ ಮಾಡಿಕೊಳ್ಳುವಂತೆ ಉದ್ದಿಮೆಗಳಿಗೆ ಅವರು ಸಲಹೆ ನೀಡಿದ್ದಾರೆ.</p>.<p>ವೆಚ್ಚ ಪರಿಶೀಲನೆ ನಡೆಸಿ ಅತಿ ಅಗತ್ಯವಲ್ಲದ ವೆಚ್ಚಗಳನ್ನು ಕಡಿತಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿದೆ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>