‘ಯುಪಿಐ ಬಳಸಿಕೊಂಡು ಎಲ್ಲಾ ಬ್ಯಾಂಕ್ಗಳು ಮತ್ತು ಎಟಿಎಂ ನೆಟ್ವರ್ಕ್ಗಳಲ್ಲಿ ಕಾರ್ಡ್-ರಹಿತ ನಗದು ಹಿಂಪಡೆಯುವ ಸೌಲಭ್ಯವನ್ನು ಲಭ್ಯವಾಗುವಂತೆ ಮಾಡಲು ಈಗ ಪ್ರಸ್ತಾಪಿಸಲಾಗಿದೆ. ಇದರಿಂದ ವಹಿವಾಟು ಸುಲಭವಾಗುವ ಜೊತೆಗೆ, ಭೌತಿಕ ಕಾರ್ಡ್ ಅಗತ್ಯ ಇರುವುದಿಲ್ಲ. ಹಾಗಾಗಿ, ಕಾರ್ಡ್ ಸ್ಕಿಮ್ಮಿಂಗ್, ಕ್ಲೋನಿಂಗ್ ಇತ್ಯಾದಿ ವಂಚನೆಗಳನ್ನು ತಡೆಯಲು ಸಹಾಯವಾಗುತ್ತದೆ’ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.