<p><strong>ಬೆಂಗಳೂರು: </strong>ಗರಿಷ್ಠ ಮುಖಬೆಲೆಯ ನೋಟುಗಳ ರದ್ದತಿ ಸಂದರ್ಭದಲ್ಲಿ ಬ್ಯಾಂಕ್ ಖಾತೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನಗದು ಠೇವಣಿ ಇರಿಸಿದ ವಹಿವಾಟುದಾರರಿಗೆ ಆದಾಯ ತೆರಿಗೆ ಇಲಾಖೆಯು ನೋಟಿಸ್ ಜಾರಿ ಮಾಡಿದೆ.</p>.<p>ನಗದು ಠೇವಣಿ ಬಗ್ಗೆ ಸಮರ್ಪಕ ವಿವರಣೆ ನೀಡದವರಿಗೆ ಹೆಚ್ಚುವರಿ ತೆರಿಗೆ ಪಾವತಿಸಲು ನೋಟಿಸ್ ನೀಡಲಾಗಿದೆ. ನೋಟಿಸ್ ಪಡೆದವರಲ್ಲಿ ಹೆಚ್ಚಿನವರು ಚಿನ್ನಾಭರಣ ವಹಿವಾಟಿನಲ್ಲಿ ತೊಡಗಿದವರು ಇದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.</p>.<p>ನಗದು ಠೇವಣಿ ಇರಿಸಿದವರಿಗೆಲ್ಲ ನೋಟಿಸ್ ನೀಡಲಾಗಿತ್ತು. ಈ ಬಗ್ಗೆ ತೃಪ್ತಿದಾಯಕ ವಿವರಣೆ ನೀಡದವರಿಗೆ ಹೆಚ್ಚುವರಿ ತೆರಿಗೆ ಪಾವತಿಸಲು ಸೂಚಿಸಿ ಮಂಗಳವಾರ ನೋಟಿಸ್ ನೀಡಲಾಗಿದೆ.</p>.<p>ನೋಟು ರದ್ದತಿ ಸಂದರ್ಭದಲ್ಲಿನ ನಗದು ವಹಿವಾಟಿಗೆ ಸಂಬಂಧಿಸಿದಂತೆ 1.5 ಲಕ್ಷ ಪ್ರಕರಣಗಳಲ್ಲಿ ಶಂಕಾಸ್ಪದ ವಹಿವಾಟಿನ ಕುರಿತು ತನಿಖೆ ನಡೆಸಲಾಗುತ್ತಿದೆ.</p>.<p>‘ಸಂಘಟಿತ ಸ್ವರೂಪದಲ್ಲಿ ಚಿನ್ನಾಭರಣಗಳ ವಹಿವಾಟು ನಡೆಸುವವರ ಮೇಲೆ ಇದು ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ’ ಎಂದು ವಿಶ್ವ ಚಿನ್ನದ ಮಂಡಳಿಯ ಭಾರತದ ಘಟಕದ ವ್ಯವಸ್ಥಾಪಕ ನಿರ್ದೇಶಕ ಸೋಮಸುಂದರಂ ಪಿಆರ್ ಅವರು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಗರಿಷ್ಠ ಮುಖಬೆಲೆಯ ನೋಟುಗಳ ರದ್ದತಿ ಸಂದರ್ಭದಲ್ಲಿ ಬ್ಯಾಂಕ್ ಖಾತೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನಗದು ಠೇವಣಿ ಇರಿಸಿದ ವಹಿವಾಟುದಾರರಿಗೆ ಆದಾಯ ತೆರಿಗೆ ಇಲಾಖೆಯು ನೋಟಿಸ್ ಜಾರಿ ಮಾಡಿದೆ.</p>.<p>ನಗದು ಠೇವಣಿ ಬಗ್ಗೆ ಸಮರ್ಪಕ ವಿವರಣೆ ನೀಡದವರಿಗೆ ಹೆಚ್ಚುವರಿ ತೆರಿಗೆ ಪಾವತಿಸಲು ನೋಟಿಸ್ ನೀಡಲಾಗಿದೆ. ನೋಟಿಸ್ ಪಡೆದವರಲ್ಲಿ ಹೆಚ್ಚಿನವರು ಚಿನ್ನಾಭರಣ ವಹಿವಾಟಿನಲ್ಲಿ ತೊಡಗಿದವರು ಇದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.</p>.<p>ನಗದು ಠೇವಣಿ ಇರಿಸಿದವರಿಗೆಲ್ಲ ನೋಟಿಸ್ ನೀಡಲಾಗಿತ್ತು. ಈ ಬಗ್ಗೆ ತೃಪ್ತಿದಾಯಕ ವಿವರಣೆ ನೀಡದವರಿಗೆ ಹೆಚ್ಚುವರಿ ತೆರಿಗೆ ಪಾವತಿಸಲು ಸೂಚಿಸಿ ಮಂಗಳವಾರ ನೋಟಿಸ್ ನೀಡಲಾಗಿದೆ.</p>.<p>ನೋಟು ರದ್ದತಿ ಸಂದರ್ಭದಲ್ಲಿನ ನಗದು ವಹಿವಾಟಿಗೆ ಸಂಬಂಧಿಸಿದಂತೆ 1.5 ಲಕ್ಷ ಪ್ರಕರಣಗಳಲ್ಲಿ ಶಂಕಾಸ್ಪದ ವಹಿವಾಟಿನ ಕುರಿತು ತನಿಖೆ ನಡೆಸಲಾಗುತ್ತಿದೆ.</p>.<p>‘ಸಂಘಟಿತ ಸ್ವರೂಪದಲ್ಲಿ ಚಿನ್ನಾಭರಣಗಳ ವಹಿವಾಟು ನಡೆಸುವವರ ಮೇಲೆ ಇದು ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ’ ಎಂದು ವಿಶ್ವ ಚಿನ್ನದ ಮಂಡಳಿಯ ಭಾರತದ ಘಟಕದ ವ್ಯವಸ್ಥಾಪಕ ನಿರ್ದೇಶಕ ಸೋಮಸುಂದರಂ ಪಿಆರ್ ಅವರು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>