<p><strong>ನವದೆಹಲಿ</strong>: ರಸ್ತೆ ಅಪಘಾತಗಳಲ್ಲಿ ಗಾಯಾಳು ಆಗುವವರಿಗೆ ನಗದು ರಹಿತವಾಗಿ ಚಿಕಿತ್ಸೆ ಒದಗಿಸುವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರವೇ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ ತಿಳಿಸಿದ್ದಾರೆ.</p>.<p>ಈ ಸೌಲಭ್ಯವನ್ನು ಸಚಿವಾಲಯವು 2024ರ ಮಾರ್ಚ್ನಲ್ಲಿ ಪ್ರಾಯೋಗಿಕವಾಗಿ ಚಂಡೀಗಢದಲ್ಲಿ ಆರಂಭಿಸಿತು. ನಂತರ ಇದನ್ನು ಆರು ರಾಜ್ಯಗಳಿಗೆ ವಿಸ್ತರಣೆ ಮಾಡಲಾಗಿದೆ. ಪ್ರಧಾನಿ ಮೋದಿ ಅವರು ಇದನ್ನು ರಾಷ್ಟ್ರದ ಎಲ್ಲೆಡೆಗೆ ವಿಸ್ತರಿಸುವ ಯೋಜನೆಯನ್ನು ಉದ್ಘಾಟಿಸಲಿದ್ದಾರೆ.</p>.<p>ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ಸಕಾಲದಲ್ಲಿ ವೈದ್ಯಕೀಯ ಚಿಕಿತ್ಸೆ ದೊರಕದೆ ಪ್ರಾಣಹಾನಿ ಸಂಭವಿಸುವುದನ್ನು ತಡೆಯುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಈ ಯೋಜನೆಯ ಅಡಿಯಲ್ಲಿ ಗಾಯಾಳುಗಳು ತಲಾ ₹1.5 ಲಕ್ಷದವರೆಗೆ, ಅಪಘಾತ ನಡೆದ ದಿನದಿಂದ ಏಳು ದಿನಗಳವರೆಗೆ ನಗದು ರಹಿತವಾಗಿ ಚಿಕಿತ್ಸೆ ಪಡೆಯಲು ಅರ್ಹರಾಗಿರುತ್ತಾರೆ. ದೇಶದ ಯಾವುದೇ ರಸ್ತೆಯಲ್ಲಿ ಮೋಟಾರು ವಾಹನಗಳಿಂದ ಉಂಟಾಗುವ ಅಪಘಾತಗಳಲ್ಲಿ ಗಾಯಗೊಂಡವರು ಈ ಸೌಲಭ್ಯಕ್ಕೆ ಅರ್ಹರಾಗಲಿದ್ದಾರೆ.</p>.<p class="title">ಆದರೆ 2024ರ ಮಾರ್ಚ್ನಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಆರಂಭವಾದ ನಂತರದಲ್ಲಿ ನಗದು ರಹಿತ ಚಿಕಿತ್ಸೆಗಾಗಿ ಬಂದ ಕೋರಿಕೆಗಳ ಪೈಕಿ ಸರಿಸುಮಾರು ಶೇ 20ರಷ್ಟು ತಿರಸ್ಕೃತಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಸ್ತೆ ಅಪಘಾತಗಳಲ್ಲಿ ಗಾಯಾಳು ಆಗುವವರಿಗೆ ನಗದು ರಹಿತವಾಗಿ ಚಿಕಿತ್ಸೆ ಒದಗಿಸುವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರವೇ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ ತಿಳಿಸಿದ್ದಾರೆ.</p>.<p>ಈ ಸೌಲಭ್ಯವನ್ನು ಸಚಿವಾಲಯವು 2024ರ ಮಾರ್ಚ್ನಲ್ಲಿ ಪ್ರಾಯೋಗಿಕವಾಗಿ ಚಂಡೀಗಢದಲ್ಲಿ ಆರಂಭಿಸಿತು. ನಂತರ ಇದನ್ನು ಆರು ರಾಜ್ಯಗಳಿಗೆ ವಿಸ್ತರಣೆ ಮಾಡಲಾಗಿದೆ. ಪ್ರಧಾನಿ ಮೋದಿ ಅವರು ಇದನ್ನು ರಾಷ್ಟ್ರದ ಎಲ್ಲೆಡೆಗೆ ವಿಸ್ತರಿಸುವ ಯೋಜನೆಯನ್ನು ಉದ್ಘಾಟಿಸಲಿದ್ದಾರೆ.</p>.<p>ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ಸಕಾಲದಲ್ಲಿ ವೈದ್ಯಕೀಯ ಚಿಕಿತ್ಸೆ ದೊರಕದೆ ಪ್ರಾಣಹಾನಿ ಸಂಭವಿಸುವುದನ್ನು ತಡೆಯುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಈ ಯೋಜನೆಯ ಅಡಿಯಲ್ಲಿ ಗಾಯಾಳುಗಳು ತಲಾ ₹1.5 ಲಕ್ಷದವರೆಗೆ, ಅಪಘಾತ ನಡೆದ ದಿನದಿಂದ ಏಳು ದಿನಗಳವರೆಗೆ ನಗದು ರಹಿತವಾಗಿ ಚಿಕಿತ್ಸೆ ಪಡೆಯಲು ಅರ್ಹರಾಗಿರುತ್ತಾರೆ. ದೇಶದ ಯಾವುದೇ ರಸ್ತೆಯಲ್ಲಿ ಮೋಟಾರು ವಾಹನಗಳಿಂದ ಉಂಟಾಗುವ ಅಪಘಾತಗಳಲ್ಲಿ ಗಾಯಗೊಂಡವರು ಈ ಸೌಲಭ್ಯಕ್ಕೆ ಅರ್ಹರಾಗಲಿದ್ದಾರೆ.</p>.<p class="title">ಆದರೆ 2024ರ ಮಾರ್ಚ್ನಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಆರಂಭವಾದ ನಂತರದಲ್ಲಿ ನಗದು ರಹಿತ ಚಿಕಿತ್ಸೆಗಾಗಿ ಬಂದ ಕೋರಿಕೆಗಳ ಪೈಕಿ ಸರಿಸುಮಾರು ಶೇ 20ರಷ್ಟು ತಿರಸ್ಕೃತಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>