<p><strong>ನವದೆಹಲಿ:</strong> 28 ಬ್ಯಾಂಕ್ಗಳಿಗೆ ₹ 22,848 ಕೋಟಿ ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಎಬಿಜಿ ಶಿಪ್ಯಾರ್ಡ್ ಲಿಮಿಟೆಡ್ನ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಿಷಿ ಅಗರ್ವಾಲ್ ಅವರನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.</p>.<p>ಬ್ಯಾಂಕ್ಗಳಿಗೆ ವಂಚಿಸಿರುವುದಕ್ಕೆ ಸಂಬಂಧಿಸಿದಂತೆ ಸಿಬಿಐ ಇದುವರೆಗೆ ದಾಖಲಿಸಿಕೊಂಡಿರುವ ಅತಿದೊಡ್ಡ ಮೊತ್ತದ ಪ್ರಕರಣ ಇದು.</p>.<p>ಸಿಬಿಐ ಅಧಿಕಾರಿಗಳು ಅಗರ್ವಾಲ್ ಅವರನ್ನು ಹಲವು ಬಾರಿ ವಿಚಾರಣೆಗೆ ಒಳಪಡಿಸಿದ್ದರು. ಹಣದ ವರ್ಗಾವಣೆಗೆ ಸಂಬಂಧಿಸಿದ ವಿವಿಧ ಆಯಾಮಗಳ ಕುರಿತು ಮುಂದಿನ ದಿನಗಳಲ್ಲಿ ಕೂಡ ಅವರ ಹೇಳಿಕೆ ದಾಖಲಿಸಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದರು.</p>.<p>ಆರೋಪಿ ಸ್ಥಾನದಲ್ಲಿ ನಿಂತಿರುವ ಕಂಪನಿಯ ಖಾತೆಗಳ ಪುಸ್ತಕ ಹಾಗೂ ಇತರ ಕೆಲವು ಮಹತ್ವದ ದಾಖಲೆಗಳು ದೊರೆತಿವೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದರು. ಈ ವಂಚನೆಯ ವಿಚಾರವಾಗಿ ಬ್ಯಾಂಕ್ಗಳ ಕಡೆಯಿಂದ 2019ರ ನವೆಂಬರ್ 8ರಂದು ಮೊದಲ ದೂರು ದಾಖಲಾಗಿತ್ತು. ದೂರಿನ ವಿಚಾರವಾಗಿ ಕೆಲವು ಸ್ಪಷ್ಟನೆಗಳನ್ನು ಒದಗಿಸುವಂತೆ ಸಿಬಿಐ 2020ರ ಮಾರ್ಚ್ 12ರಂದು ಕೋರಿತ್ತು.</p>.<p>2020ರ ಆಗಸ್ಟ್ನಲ್ಲಿ ಬ್ಯಾಂಕ್ಗಳು ಹೊಸದಾಗಿ ದೂರು ಸಲ್ಲಿಸಿದವು. ದೂರನ್ನು ಪರಿಶೀಲಿಸಿದ ಸಿಬಿಐ ಒಂದೂವರೆ ವರ್ಷದ ನಂತರ, ಈ ವರ್ಷದ ಫೆಬ್ರುವರಿ 7ರಂದು, ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 28 ಬ್ಯಾಂಕ್ಗಳಿಗೆ ₹ 22,848 ಕೋಟಿ ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಎಬಿಜಿ ಶಿಪ್ಯಾರ್ಡ್ ಲಿಮಿಟೆಡ್ನ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಿಷಿ ಅಗರ್ವಾಲ್ ಅವರನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.</p>.<p>ಬ್ಯಾಂಕ್ಗಳಿಗೆ ವಂಚಿಸಿರುವುದಕ್ಕೆ ಸಂಬಂಧಿಸಿದಂತೆ ಸಿಬಿಐ ಇದುವರೆಗೆ ದಾಖಲಿಸಿಕೊಂಡಿರುವ ಅತಿದೊಡ್ಡ ಮೊತ್ತದ ಪ್ರಕರಣ ಇದು.</p>.<p>ಸಿಬಿಐ ಅಧಿಕಾರಿಗಳು ಅಗರ್ವಾಲ್ ಅವರನ್ನು ಹಲವು ಬಾರಿ ವಿಚಾರಣೆಗೆ ಒಳಪಡಿಸಿದ್ದರು. ಹಣದ ವರ್ಗಾವಣೆಗೆ ಸಂಬಂಧಿಸಿದ ವಿವಿಧ ಆಯಾಮಗಳ ಕುರಿತು ಮುಂದಿನ ದಿನಗಳಲ್ಲಿ ಕೂಡ ಅವರ ಹೇಳಿಕೆ ದಾಖಲಿಸಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದರು.</p>.<p>ಆರೋಪಿ ಸ್ಥಾನದಲ್ಲಿ ನಿಂತಿರುವ ಕಂಪನಿಯ ಖಾತೆಗಳ ಪುಸ್ತಕ ಹಾಗೂ ಇತರ ಕೆಲವು ಮಹತ್ವದ ದಾಖಲೆಗಳು ದೊರೆತಿವೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದರು. ಈ ವಂಚನೆಯ ವಿಚಾರವಾಗಿ ಬ್ಯಾಂಕ್ಗಳ ಕಡೆಯಿಂದ 2019ರ ನವೆಂಬರ್ 8ರಂದು ಮೊದಲ ದೂರು ದಾಖಲಾಗಿತ್ತು. ದೂರಿನ ವಿಚಾರವಾಗಿ ಕೆಲವು ಸ್ಪಷ್ಟನೆಗಳನ್ನು ಒದಗಿಸುವಂತೆ ಸಿಬಿಐ 2020ರ ಮಾರ್ಚ್ 12ರಂದು ಕೋರಿತ್ತು.</p>.<p>2020ರ ಆಗಸ್ಟ್ನಲ್ಲಿ ಬ್ಯಾಂಕ್ಗಳು ಹೊಸದಾಗಿ ದೂರು ಸಲ್ಲಿಸಿದವು. ದೂರನ್ನು ಪರಿಶೀಲಿಸಿದ ಸಿಬಿಐ ಒಂದೂವರೆ ವರ್ಷದ ನಂತರ, ಈ ವರ್ಷದ ಫೆಬ್ರುವರಿ 7ರಂದು, ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>