ನವದೆಹಲಿ: ಖಾಸಗಿ ಕಂಪನಿಯೊಂದರಿಂದ ₹20 ಲಕ್ಷ ಲಂಚ ಪಡೆಯುತ್ತಿದ್ದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಪ್ರಧಾನ ವ್ಯವಸ್ಥಾಪಕರೊಬ್ಬರನ್ನು, ಸಿಬಿಐ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.
ಯೋಜನಾ ನಿರ್ದೇಶಕರೂ ಆಗಿರುವ ಅರವಿಂದ ಕಾಳೆ ಬಂಧಿತ. ಮಹಾರಾಷ್ಟ್ರದ ನಾಗ್ಪುರದಲ್ಲಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಬಂಧಿಸಲಾಗಿದ್ದು, ಲಂಚದ ಹಣ ಸೇರಿ ಒಟ್ಟು ₹45 ಲಕ್ಷವನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಕಾಳೆ ಸೇರಿದಂತೆ ಇತರೆ 11 ಮಂದಿ ಹಾಗೂ ಖಾಸಗಿ ಕಂಪನಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.