<p><strong>ನವದೆಹಲಿ:</strong> ಬ್ಯಾಂಕ್ಗಳಲ್ಲಿ ಜನ್ಧನ್ ಖಾತೆ ತೆರೆಯಲು ಹೆಚ್ಚಿನ ಉತ್ತೇಜನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.</p>.<p>ಹಣಕಾಸು ಸೇರ್ಪಡೆಯ ಈ ಮಹತ್ವಾಕಾಂಕ್ಷೆಯ ಯೋಜನೆಗೆ 2014ರ ಆಗಸ್ಟ್ನಲ್ಲಿ ಚಾಲನೆ ನೀಡಲಾಗಿತ್ತು. ಈ ಯೋಜನೆಯ ಯಶಸ್ಸಿನಿಂದ ಉತ್ತೇಜನಗೊಂಡಿರುವ ಕೇಂದ್ರ ಸರ್ಕಾರ, ಖಾತೆ ತೆರೆಯುವವರಿಗೆ ಉತ್ತೇಜನ ನೀಡಲು ನಿರ್ಧರಿಸಿದೆ. ‘ಪ್ರತಿ ಕುಟುಂಬ ಮತ್ತು ಪ್ರತಿಯೊಬ್ಬ ವಯಸ್ಕ ಇಂತಹ ಖಾತೆ ತೆರೆಯುವಂತೆ ಪ್ರೋತ್ಸಾಹ ನೀಡಲಾಗುವುದು’ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.</p>.<p>ಈ ಖಾತೆದಾರರಿಗೆ ಒದಗಿಸುತ್ತಿದ್ದ ಹೆಚ್ಚುವರಿ ಸಾಲ ಸೌಲಭ್ಯದ ಮೊತ್ತವನ್ನು (ಓವರ್ಡ್ರಾಫ್ಟ್) ದುಪ್ಪಟ್ಟುಗೊಳಿಸಿ ₹ 10 ಸಾವಿರಕ್ಕೆ ಏರಿಸಲಾಗಿದೆ. ಉಚಿತ ಅಪಘಾತ ವಿಮೆಯ ಮೊತ್ತವನ್ನು ₹ 1 ಲಕ್ಷದಿಂದ ₹ 2 ಲಕ್ಷಕ್ಕೆ ಹೆಚ್ಚಿಸಲಾಗಿದೆ. ₹ 2 ಸಾವಿರವರೆಗಿನ ಓವರ್ಡ್ರಾಫ್ಟ್ಗೆ ಯಾವುದೇ ಷರತ್ತು ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಗರಿಷ್ಠ ವಯೋಮಿತಿಯನ್ನು 60 ವರ್ಷಗಳಿಂದ 65 ವರ್ಷಗಳಿಗೆ ಹೆಚ್ಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬ್ಯಾಂಕ್ಗಳಲ್ಲಿ ಜನ್ಧನ್ ಖಾತೆ ತೆರೆಯಲು ಹೆಚ್ಚಿನ ಉತ್ತೇಜನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.</p>.<p>ಹಣಕಾಸು ಸೇರ್ಪಡೆಯ ಈ ಮಹತ್ವಾಕಾಂಕ್ಷೆಯ ಯೋಜನೆಗೆ 2014ರ ಆಗಸ್ಟ್ನಲ್ಲಿ ಚಾಲನೆ ನೀಡಲಾಗಿತ್ತು. ಈ ಯೋಜನೆಯ ಯಶಸ್ಸಿನಿಂದ ಉತ್ತೇಜನಗೊಂಡಿರುವ ಕೇಂದ್ರ ಸರ್ಕಾರ, ಖಾತೆ ತೆರೆಯುವವರಿಗೆ ಉತ್ತೇಜನ ನೀಡಲು ನಿರ್ಧರಿಸಿದೆ. ‘ಪ್ರತಿ ಕುಟುಂಬ ಮತ್ತು ಪ್ರತಿಯೊಬ್ಬ ವಯಸ್ಕ ಇಂತಹ ಖಾತೆ ತೆರೆಯುವಂತೆ ಪ್ರೋತ್ಸಾಹ ನೀಡಲಾಗುವುದು’ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.</p>.<p>ಈ ಖಾತೆದಾರರಿಗೆ ಒದಗಿಸುತ್ತಿದ್ದ ಹೆಚ್ಚುವರಿ ಸಾಲ ಸೌಲಭ್ಯದ ಮೊತ್ತವನ್ನು (ಓವರ್ಡ್ರಾಫ್ಟ್) ದುಪ್ಪಟ್ಟುಗೊಳಿಸಿ ₹ 10 ಸಾವಿರಕ್ಕೆ ಏರಿಸಲಾಗಿದೆ. ಉಚಿತ ಅಪಘಾತ ವಿಮೆಯ ಮೊತ್ತವನ್ನು ₹ 1 ಲಕ್ಷದಿಂದ ₹ 2 ಲಕ್ಷಕ್ಕೆ ಹೆಚ್ಚಿಸಲಾಗಿದೆ. ₹ 2 ಸಾವಿರವರೆಗಿನ ಓವರ್ಡ್ರಾಫ್ಟ್ಗೆ ಯಾವುದೇ ಷರತ್ತು ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಗರಿಷ್ಠ ವಯೋಮಿತಿಯನ್ನು 60 ವರ್ಷಗಳಿಂದ 65 ವರ್ಷಗಳಿಗೆ ಹೆಚ್ಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>