ಹಣಕಾಸು ಸೇರ್ಪಡೆಯ ಈ ಮಹತ್ವಾಕಾಂಕ್ಷೆಯ ಯೋಜನೆಗೆ 2014ರ ಆಗಸ್ಟ್ನಲ್ಲಿ ಚಾಲನೆ ನೀಡಲಾಗಿತ್ತು. ಈ ಯೋಜನೆಯ ಯಶಸ್ಸಿನಿಂದ ಉತ್ತೇಜನಗೊಂಡಿರುವ ಕೇಂದ್ರ ಸರ್ಕಾರ, ಖಾತೆ ತೆರೆಯುವವರಿಗೆ ಉತ್ತೇಜನ ನೀಡಲು ನಿರ್ಧರಿಸಿದೆ. ‘ಪ್ರತಿ ಕುಟುಂಬ ಮತ್ತು ಪ್ರತಿಯೊಬ್ಬ ವಯಸ್ಕ ಇಂತಹ ಖಾತೆ ತೆರೆಯುವಂತೆ ಪ್ರೋತ್ಸಾಹ ನೀಡಲಾಗುವುದು’ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.