ವಂಚನೆ ಪ್ರಕರಣಗಳಲ್ಲಿ ವಿಚಾರಣೆಗೆ ಗುರಿಯಾಗಬೇಕಾದ ಕಾರಣಕ್ಕೆ ಬ್ಯಾಂಕ್ನ ಹಿರಿಯ ಅಧಿಕಾರಿಗಳು ದೊಡ್ಡ ಮೊತ್ತದ ಸಾಲ ಮಂಜೂರಾತಿಗೆ ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಉದ್ದಿಮೆ ಮತ್ತು ಕೈಗಾರಿಕಾ ವಲಯಕ್ಕೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳ ಸಾಲ ನೀಡಿಕೆ ಪ್ರಮಾಣ ಕಡಿಮೆಯಾಗಿ, ಆರ್ಥಿಕತೆಯಲ್ಲಿ ಮಂದಗತಿಯ ಪ್ರಗತಿ ಕಂಡು ಬರುತ್ತಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಸರಣಿಯೋಪಾದಿಯಲ್ಲಿ ರೆಪೊ ದರ ಕಡಿತ ಮಾಡಿದ್ದರೂ ಬ್ಯಾಂಕ್ಗಳ ಸಾಲ ವಿತರಣೆ ಹೆಚ್ಚಳಗೊಂಡಿಲ್ಲ. ಈ ಪರಿಸ್ಥಿತಿ ಬದಲಾಯಿಸಿ ಬ್ಯಾಂಕ್ ಮುಖ್ಯಸ್ಥರಲ್ಲಿ ವಿಶ್ವಾಸ ಮೂಡಿಸಲು ಸರ್ಕಾರ ಮುಂದಾಗಿದೆ.