<p><strong>ನವದೆಹಲಿ:</strong> ‘ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವ ಯಾವುದೇ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದೆ ಇಲ್ಲ’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಗೆ ಸೋಮವಾರ ತಿಳಿಸಿದ್ದಾರೆ.</p>.<p>ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಹೆಚ್ಚಿನ ಸಾಲ ನೀಡುವುದು ಸೇರಿದಂತೆ ರೈತರ ಆರ್ಥಿಕ ಸ್ಥಿತಿ ಸದೃಢಗೊಳಿಸಲು ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಂಡಿದೆ. ₹3 ಲಕ್ಷದವರೆಗೆ ಬೆಳೆ ಸಾಲವನ್ನು ಸಬ್ಸಿಡಿ ಬಡ್ಡಿ ದರದಲ್ಲಿ ನೀಡಲಾಗುತ್ತಿದ್ದು, ಸಕಾಲಿಕ ಮರುಪಾವತಿಗೆ ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ಅವರು ಲಿಖಿತ ಉತ್ತರದಲ್ಲಿ ಹೇಳಿದ್ದಾರೆ.</p>.<p>ಕೃಷಿ ಸಂಬಂಧಿತ ಚಟುವಟಿಕೆಗಳಿಗಾಗಿ ಅಲ್ಪಾವಧಿಗೆ ಅಡಮಾನರಹಿತವಾಗಿ ನೀಡುವ ಸಾಲವನ್ನು ₹1.60 ಲಕ್ಷದಿಂದ ₹2 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಆದ್ಯತಾ ವಲಯ ಸಾಲ ಮಾರ್ಗಸೂಚಿಗಳ ಅಡಿಯಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯಿಂದ ಕೃಷಿ ಸೇರಿದಂತೆ ಆರ್ಥಿಕತೆಯ ಆದ್ಯತೆಯ ವಲಯಗಳಿಗೆ ಸಾಕಷ್ಟು ಸಾಲವನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವ ಯಾವುದೇ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದೆ ಇಲ್ಲ’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಗೆ ಸೋಮವಾರ ತಿಳಿಸಿದ್ದಾರೆ.</p>.<p>ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಹೆಚ್ಚಿನ ಸಾಲ ನೀಡುವುದು ಸೇರಿದಂತೆ ರೈತರ ಆರ್ಥಿಕ ಸ್ಥಿತಿ ಸದೃಢಗೊಳಿಸಲು ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಂಡಿದೆ. ₹3 ಲಕ್ಷದವರೆಗೆ ಬೆಳೆ ಸಾಲವನ್ನು ಸಬ್ಸಿಡಿ ಬಡ್ಡಿ ದರದಲ್ಲಿ ನೀಡಲಾಗುತ್ತಿದ್ದು, ಸಕಾಲಿಕ ಮರುಪಾವತಿಗೆ ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ಅವರು ಲಿಖಿತ ಉತ್ತರದಲ್ಲಿ ಹೇಳಿದ್ದಾರೆ.</p>.<p>ಕೃಷಿ ಸಂಬಂಧಿತ ಚಟುವಟಿಕೆಗಳಿಗಾಗಿ ಅಲ್ಪಾವಧಿಗೆ ಅಡಮಾನರಹಿತವಾಗಿ ನೀಡುವ ಸಾಲವನ್ನು ₹1.60 ಲಕ್ಷದಿಂದ ₹2 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಆದ್ಯತಾ ವಲಯ ಸಾಲ ಮಾರ್ಗಸೂಚಿಗಳ ಅಡಿಯಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯಿಂದ ಕೃಷಿ ಸೇರಿದಂತೆ ಆರ್ಥಿಕತೆಯ ಆದ್ಯತೆಯ ವಲಯಗಳಿಗೆ ಸಾಕಷ್ಟು ಸಾಲವನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>