<p><strong>ನವದೆಹಲಿ:</strong> ಎಲ್ಪಿಜಿ ದಾಸ್ತಾನು ಪ್ರಮಾಣವನ್ನು ಕನಿಷ್ಠ 30 ದಿನಗಳ ಬೇಡಿಕೆಗೆ ಆಗುವ ಮಟ್ಟಕ್ಕೆ ಹೆಚ್ಚಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರವು ತನ್ನ ಮಾಲೀಕತ್ವದ ತೈಲೋತ್ಪನ್ನಗಳ ಮಾರಾಟ ಕಂಪನಿಗಳಿಗೆ ಸೂಚನೆ ನಿಡಿದೆ.</p>.<p>‘ಇಂಧನ ದಾಸ್ತಾನು ಘಟಕಗಳ ವಿಚಾರವಾಗಿ ನಾವು ಒಂದಿಷ್ಟು ಕೆಲಸ ಮಾಡುತ್ತಿದ್ದೇವೆ. ಕನಿಷ್ಠ ಮೂವತ್ತು ದಿನಗಳಿಗೆ ಆಗುವಷ್ಟು ಎಲ್ಪಿಜಿ ದಾಸ್ತಾನು ಇರಿಸಿಕೊಳ್ಳುವಂತೆ ಕಂಪನಿಗಳಿಗೆ ಸೂಚಿಸಲಾಗಿದೆ. ಆ ದಿಸೆಯಲ್ಲಿ ಅವು ಕೆಲಸ ಮಾಡುತ್ತಿವೆ’ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p class="bodytext">ವಾಣಿಜ್ಯ ಉದ್ದೇಶದಿಂದ ಇರಿಸಿಕೊಳ್ಳುವ ದಾಸ್ತಾನು ಅಲ್ಲದೆ, ಹೆಚ್ಚುವರಿಯಾಗಿ ದಾಸ್ತಾನು ಇರಿಸಿಕೊಳ್ಳಲು ಕ್ರಿಯಾಯೋಜನೆ ಸಿದ್ಧಪಡಿಸಿ ಕೊಡುವಂತೆ ಕೇಂದ್ರ ಸರ್ಕಾರವು ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ಗೆ ಸೂಚನೆ ನೀಡಿದೆ.</p>.<p class="bodytext">ಕಚ್ಚಾ ತೈಲದ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲು ಕೂಡ ಕೇಂದ್ರ ಸರ್ಕಾರವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಸುಜಾತಾ ಅವರು ತಿಳಿಸಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ವಿವರ ನೀಡಲಿಲ್ಲ.</p>.<p class="bodytext">ದೇಶದ ಹಲವು ಪೆಟ್ರೋಲ್ ಬಂಕ್ಗಳಲ್ಲಿ ಅಸಹಜ ಪ್ರಮಾಣದಲ್ಲಿ ಮಾರಾಟ ಚಟುವಟಿಕೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.</p>.<p class="bodytext">ಕೃಷಿ ವಲಯದಿಂದ ಬರುತ್ತಿರುವ ಬೇಡಿಕೆಯು ಇಂಧನ ಮಾರಾಟ ಜಾಸ್ತಿ ಆಗಲು ಒಂದು ಕಾರಣವಾಗಿದೆ. ಇಂಧನ ಸಗಟು ಖರೀದಿದಾರರು ಕೂಡ ಬೆಲೆ ವ್ಯತ್ಯಾಸದ ಕಾರಣದಿಂದಾಗಿ ಸರ್ಕಾರಿ ಪೆಟ್ರೋಲ್ ಬಂಕ್ಗಳ ಕಡೆ ಬರುತ್ತಿರುವುದು ಮಾರಾಟ ಹೆಚ್ಚಳಕ್ಕೆ ಕಾರಣವಾಗಿದೆ ಎಂದಿದ್ದಾರೆ.</p>.<p class="bodytext">ದೇಶದ 150ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಪೆಟ್ರೋಲ್ ಮಾರಾಟವು ಶೇ 30ಕ್ಕಿಂತ ಜಾಸ್ತಿ ಆಗಿದೆ. 14 ಜಿಲ್ಲೆಗಳಲ್ಲಿ ಇಂಧನ ಮಾರಾಟವು ದುಪ್ಪಟ್ಟಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಎಲ್ಪಿಜಿ ದಾಸ್ತಾನು ಪ್ರಮಾಣವನ್ನು ಕನಿಷ್ಠ 30 ದಿನಗಳ ಬೇಡಿಕೆಗೆ ಆಗುವ ಮಟ್ಟಕ್ಕೆ ಹೆಚ್ಚಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರವು ತನ್ನ ಮಾಲೀಕತ್ವದ ತೈಲೋತ್ಪನ್ನಗಳ ಮಾರಾಟ ಕಂಪನಿಗಳಿಗೆ ಸೂಚನೆ ನಿಡಿದೆ.</p>.<p>‘ಇಂಧನ ದಾಸ್ತಾನು ಘಟಕಗಳ ವಿಚಾರವಾಗಿ ನಾವು ಒಂದಿಷ್ಟು ಕೆಲಸ ಮಾಡುತ್ತಿದ್ದೇವೆ. ಕನಿಷ್ಠ ಮೂವತ್ತು ದಿನಗಳಿಗೆ ಆಗುವಷ್ಟು ಎಲ್ಪಿಜಿ ದಾಸ್ತಾನು ಇರಿಸಿಕೊಳ್ಳುವಂತೆ ಕಂಪನಿಗಳಿಗೆ ಸೂಚಿಸಲಾಗಿದೆ. ಆ ದಿಸೆಯಲ್ಲಿ ಅವು ಕೆಲಸ ಮಾಡುತ್ತಿವೆ’ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p class="bodytext">ವಾಣಿಜ್ಯ ಉದ್ದೇಶದಿಂದ ಇರಿಸಿಕೊಳ್ಳುವ ದಾಸ್ತಾನು ಅಲ್ಲದೆ, ಹೆಚ್ಚುವರಿಯಾಗಿ ದಾಸ್ತಾನು ಇರಿಸಿಕೊಳ್ಳಲು ಕ್ರಿಯಾಯೋಜನೆ ಸಿದ್ಧಪಡಿಸಿ ಕೊಡುವಂತೆ ಕೇಂದ್ರ ಸರ್ಕಾರವು ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ಗೆ ಸೂಚನೆ ನೀಡಿದೆ.</p>.<p class="bodytext">ಕಚ್ಚಾ ತೈಲದ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲು ಕೂಡ ಕೇಂದ್ರ ಸರ್ಕಾರವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಸುಜಾತಾ ಅವರು ತಿಳಿಸಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ವಿವರ ನೀಡಲಿಲ್ಲ.</p>.<p class="bodytext">ದೇಶದ ಹಲವು ಪೆಟ್ರೋಲ್ ಬಂಕ್ಗಳಲ್ಲಿ ಅಸಹಜ ಪ್ರಮಾಣದಲ್ಲಿ ಮಾರಾಟ ಚಟುವಟಿಕೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.</p>.<p class="bodytext">ಕೃಷಿ ವಲಯದಿಂದ ಬರುತ್ತಿರುವ ಬೇಡಿಕೆಯು ಇಂಧನ ಮಾರಾಟ ಜಾಸ್ತಿ ಆಗಲು ಒಂದು ಕಾರಣವಾಗಿದೆ. ಇಂಧನ ಸಗಟು ಖರೀದಿದಾರರು ಕೂಡ ಬೆಲೆ ವ್ಯತ್ಯಾಸದ ಕಾರಣದಿಂದಾಗಿ ಸರ್ಕಾರಿ ಪೆಟ್ರೋಲ್ ಬಂಕ್ಗಳ ಕಡೆ ಬರುತ್ತಿರುವುದು ಮಾರಾಟ ಹೆಚ್ಚಳಕ್ಕೆ ಕಾರಣವಾಗಿದೆ ಎಂದಿದ್ದಾರೆ.</p>.<p class="bodytext">ದೇಶದ 150ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಪೆಟ್ರೋಲ್ ಮಾರಾಟವು ಶೇ 30ಕ್ಕಿಂತ ಜಾಸ್ತಿ ಆಗಿದೆ. 14 ಜಿಲ್ಲೆಗಳಲ್ಲಿ ಇಂಧನ ಮಾರಾಟವು ದುಪ್ಪಟ್ಟಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>