<p><strong>ನವದೆಹಲಿ</strong>: ರೈತರು ಪಿಎಂ–ಕಿಸಾನ್ ಪೋರ್ಟಲ್ನಲ್ಲಿರುವ ತಮ್ಮ ವಿವರಗಳನ್ನು ಪರಿಶೀಲಿಸಬೇಕು, ಇ–ಕೆವೈಸಿ ಕೆಲಸಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ. ಪಿಎಂ–ಕಿಸಾನ್ ಯೋಜನೆಯ 22ನೆಯ ಕಂತಿನ ಹಣವನ್ನು ಕೇಂದ್ರ ಸರ್ಕಾರವು ಶುಕ್ರವಾರ ಬಿಡುಗಡೆ ಮಾಡಲಿದೆ.</p>.<p>ಅಸ್ಸಾಂನ ಗುವಾಹಟಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ–ಕಿಸಾನ್ ಯೋಜನೆಯ ಮೊತ್ತವನ್ನು 9.32 ಕೋಟಿ ರೈತರಿಗೆ ವರ್ಗಾವಣೆ ಮಾಡಲಿದ್ದಾರೆ.</p>.<p>‘ಅಗತ್ಯ ಕಂಡುಬಂದರೆ ಇ–ಕೆವೈಸಿ ಕೆಲಸವನ್ನು ಆದಷ್ಟು ಬೇಗ ಪೂರ್ಣಗೊಳಿಸಿ. ಆಗ, 22ನೆಯ ಕಂತಿನ ಹಣವು ರೈತರ ಖಾತೆಗೆ ಸರಿಯಾದ ಸಮಯಕ್ಕೆ ಜಮಾ ಆಗುತ್ತದೆ’ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿದ್ದಾರೆ.</p>.<p class="bodytext">ಅರ್ಹರಿಗೆ ನೆರವು ಒದಗಿಸುವ ಉದ್ದೇಶದಿಂದ ‘ನಿಮ್ಮ ಸ್ಥಿತಿ ತಿಳಿಯಿರಿ’ (Know Your Status–KYS) ಸೌಲಭ್ಯವನ್ನು ಪೋರ್ಟಲ್ನಲ್ಲಿ ನೀಡಲಾಗಿದೆ. ಇದರ ಮೂಲಕ ಪಾವತಿ ಸ್ಥಿತಿ, ಅರ್ಹತೆ, ಆಧಾರ್ ಜೋಡಣೆ ಮತ್ತು ಇ–ಕೆವೈಸಿ ಸ್ಥಿತಿಯನ್ನು ತಿಳಿಯಬಹುದು.</p>.<p class="bodytext">ರೈತರು ಇ–ಕೆವೈಸಿ ಪ್ರಕ್ರಿಯೆಯನ್ನು ಮನೆಗಳಿಂದಲೇ ಪೂರ್ಣಗೊಳಿಸಲು ಅವಕಾಶ ಕಲ್ಪಿಸುವ ಆ್ಯಪ್ ಒಂದನ್ನು ಕೂಡ ಕೇಂದ್ರವು ಬಿಡುಗಡೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರೈತರು ಪಿಎಂ–ಕಿಸಾನ್ ಪೋರ್ಟಲ್ನಲ್ಲಿರುವ ತಮ್ಮ ವಿವರಗಳನ್ನು ಪರಿಶೀಲಿಸಬೇಕು, ಇ–ಕೆವೈಸಿ ಕೆಲಸಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ. ಪಿಎಂ–ಕಿಸಾನ್ ಯೋಜನೆಯ 22ನೆಯ ಕಂತಿನ ಹಣವನ್ನು ಕೇಂದ್ರ ಸರ್ಕಾರವು ಶುಕ್ರವಾರ ಬಿಡುಗಡೆ ಮಾಡಲಿದೆ.</p>.<p>ಅಸ್ಸಾಂನ ಗುವಾಹಟಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ–ಕಿಸಾನ್ ಯೋಜನೆಯ ಮೊತ್ತವನ್ನು 9.32 ಕೋಟಿ ರೈತರಿಗೆ ವರ್ಗಾವಣೆ ಮಾಡಲಿದ್ದಾರೆ.</p>.<p>‘ಅಗತ್ಯ ಕಂಡುಬಂದರೆ ಇ–ಕೆವೈಸಿ ಕೆಲಸವನ್ನು ಆದಷ್ಟು ಬೇಗ ಪೂರ್ಣಗೊಳಿಸಿ. ಆಗ, 22ನೆಯ ಕಂತಿನ ಹಣವು ರೈತರ ಖಾತೆಗೆ ಸರಿಯಾದ ಸಮಯಕ್ಕೆ ಜಮಾ ಆಗುತ್ತದೆ’ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿದ್ದಾರೆ.</p>.<p class="bodytext">ಅರ್ಹರಿಗೆ ನೆರವು ಒದಗಿಸುವ ಉದ್ದೇಶದಿಂದ ‘ನಿಮ್ಮ ಸ್ಥಿತಿ ತಿಳಿಯಿರಿ’ (Know Your Status–KYS) ಸೌಲಭ್ಯವನ್ನು ಪೋರ್ಟಲ್ನಲ್ಲಿ ನೀಡಲಾಗಿದೆ. ಇದರ ಮೂಲಕ ಪಾವತಿ ಸ್ಥಿತಿ, ಅರ್ಹತೆ, ಆಧಾರ್ ಜೋಡಣೆ ಮತ್ತು ಇ–ಕೆವೈಸಿ ಸ್ಥಿತಿಯನ್ನು ತಿಳಿಯಬಹುದು.</p>.<p class="bodytext">ರೈತರು ಇ–ಕೆವೈಸಿ ಪ್ರಕ್ರಿಯೆಯನ್ನು ಮನೆಗಳಿಂದಲೇ ಪೂರ್ಣಗೊಳಿಸಲು ಅವಕಾಶ ಕಲ್ಪಿಸುವ ಆ್ಯಪ್ ಒಂದನ್ನು ಕೂಡ ಕೇಂದ್ರವು ಬಿಡುಗಡೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>