<p><strong>ನವದೆಹಲಿ:</strong> ಬೆಂಗಳೂರು ಗ್ರಾಮಾಂತರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ರೈತರು ಬೆಳೆಯುವ ‘ಗುಲಾಬಿ ಈರುಳ್ಳಿ’ (ರೋಸ್ ಆನಿಯನ್) ರಫ್ತು ಮಾಡಲು ಕೇಂದ್ರ ಸರ್ಕಾರ ಮತ್ತೆ ಅನುಮತಿ ನೀಡಿದೆ.</p>.<p>ರೈತರ ಮನವಿ ಪುರಸ್ಕರಿಸಿ ವಾರ್ಷಿಕ 10,000 ಟನ್ ಈರುಳ್ಳಿ ರಫ್ತಿಗೆ ಅನುಮತಿ ನೀಡಿ ಶುಕ್ರವಾರ ಆದೇಶಿಸಲಾಗಿದೆ ಎಂದು ಕೇಂದ್ರದ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ತಿಳಿಸಿದ್ದಾರೆ.</p>.<p>ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತಿತರ ಜಿಲ್ಲೆಗಳಲ್ಲಿ ಬೆಳೆಯುವ ಗುಲಾಬಿ ಈರುಳ್ಳಿ ಹಾಗೂ ಆಂಧ್ರದ ಕೃಷ್ಣಪುರಂ ಈರುಳ್ಳಿಯ ರಫ್ತಿಗೆ ಮಾರ್ಚ್ 31ರವರೆಗೆ ಅವಕಾಶ ನೀಡುವ ಮೂಲಕ ವಿದೇಶಿ ವ್ಯಾಪಾರ ನಿರ್ದೇಶನಾಲಯ ಅಧಿಸೂಚನೆ ಹೊರಡಿಸಿದೆ.</p>.<p>ದೇಶೀ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಹೆಚ್ಚಿದ್ದರಿಂದ ಬೆಂಗಳೂರು ಗುಲಾಬಿ ಮತ್ತು ಕೃಷ್ಣಪುರಂ ಈರುಳ್ಳಿ ಸೇರಿದಂತೆ ಎಲ್ಲ ರೀತಿಯ ಈರುಳ್ಳಿಯನ್ನು ವಿದೇಶಗಳಿಗೆ ರಫ್ತು ಮಾಡುವುದನ್ನು ಕೇಂದ್ರ ಇತ್ತೀಚೆಗೆ ನಿಷೇಧಿಸಿತ್ತು.</p>.<p>ಸ್ಥಳೀಯವಾಗಿ ಕಡಿಮೆ ಬೇಡಿಕೆ ಹೊಂದಿರುವ ಬೆಂಗಳೂರು ಗುಲಾಬಿ ಹಾಗೂ ಕೃಷ್ಣಪುರಂ ಈರುಳ್ಳಿಗೆ ವಿದೇಶಗಳಲ್ಲಿ ಬೇಡಿಕೆ ಇದೆ. ಬಿಜೆಪಿ ಸಂಸದರು ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುಲಾಬಿ ಈರುಳ್ಳಿ ರಫ್ತು ನಿಷೇಧವನ್ನು ರದ್ದುಪಡಿಸುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬೆಂಗಳೂರು ಗ್ರಾಮಾಂತರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ರೈತರು ಬೆಳೆಯುವ ‘ಗುಲಾಬಿ ಈರುಳ್ಳಿ’ (ರೋಸ್ ಆನಿಯನ್) ರಫ್ತು ಮಾಡಲು ಕೇಂದ್ರ ಸರ್ಕಾರ ಮತ್ತೆ ಅನುಮತಿ ನೀಡಿದೆ.</p>.<p>ರೈತರ ಮನವಿ ಪುರಸ್ಕರಿಸಿ ವಾರ್ಷಿಕ 10,000 ಟನ್ ಈರುಳ್ಳಿ ರಫ್ತಿಗೆ ಅನುಮತಿ ನೀಡಿ ಶುಕ್ರವಾರ ಆದೇಶಿಸಲಾಗಿದೆ ಎಂದು ಕೇಂದ್ರದ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ತಿಳಿಸಿದ್ದಾರೆ.</p>.<p>ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತಿತರ ಜಿಲ್ಲೆಗಳಲ್ಲಿ ಬೆಳೆಯುವ ಗುಲಾಬಿ ಈರುಳ್ಳಿ ಹಾಗೂ ಆಂಧ್ರದ ಕೃಷ್ಣಪುರಂ ಈರುಳ್ಳಿಯ ರಫ್ತಿಗೆ ಮಾರ್ಚ್ 31ರವರೆಗೆ ಅವಕಾಶ ನೀಡುವ ಮೂಲಕ ವಿದೇಶಿ ವ್ಯಾಪಾರ ನಿರ್ದೇಶನಾಲಯ ಅಧಿಸೂಚನೆ ಹೊರಡಿಸಿದೆ.</p>.<p>ದೇಶೀ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಹೆಚ್ಚಿದ್ದರಿಂದ ಬೆಂಗಳೂರು ಗುಲಾಬಿ ಮತ್ತು ಕೃಷ್ಣಪುರಂ ಈರುಳ್ಳಿ ಸೇರಿದಂತೆ ಎಲ್ಲ ರೀತಿಯ ಈರುಳ್ಳಿಯನ್ನು ವಿದೇಶಗಳಿಗೆ ರಫ್ತು ಮಾಡುವುದನ್ನು ಕೇಂದ್ರ ಇತ್ತೀಚೆಗೆ ನಿಷೇಧಿಸಿತ್ತು.</p>.<p>ಸ್ಥಳೀಯವಾಗಿ ಕಡಿಮೆ ಬೇಡಿಕೆ ಹೊಂದಿರುವ ಬೆಂಗಳೂರು ಗುಲಾಬಿ ಹಾಗೂ ಕೃಷ್ಣಪುರಂ ಈರುಳ್ಳಿಗೆ ವಿದೇಶಗಳಲ್ಲಿ ಬೇಡಿಕೆ ಇದೆ. ಬಿಜೆಪಿ ಸಂಸದರು ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುಲಾಬಿ ಈರುಳ್ಳಿ ರಫ್ತು ನಿಷೇಧವನ್ನು ರದ್ದುಪಡಿಸುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>