<p><strong>ಅಹಮದಾಬಾದ್</strong>: ನೋಂದಾಯಿತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (ಪ್ಯಾಕ್ಸ್) ಆರ್ಥಿಕ ಸಂಕಷ್ಟದ ಸುಳಿಗೆ ಸಿಲುಕುವುದನ್ನು ತಡೆಯಲು ಸರ್ಕಾರವು ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ತಿಳಿಸಿದ್ದಾರೆ.</p>.<p>ಭಾನುವಾರ ನಡೆದ ಸಹಕಾರ ಮಹಾ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪ್ಯಾಕ್ಸ್ಗಳು ಆರ್ಥಿಕವಾಗಿ ದಿವಾಳಿಯಾದರೆ ಆ ಸಮಸ್ಯೆಯ ತ್ವರಿತ ಇತ್ಯರ್ಥ ಹಾಗೂ ಅವುಗಳ ಸ್ಥಾನದಲ್ಲಿ ಹೊಸ ಪ್ಯಾಕ್ಸ್ಗಳ ನೋಂದಣಿಗೆ ಸಂಬಂಧಿಸಿದಂತೆ ಸರ್ಕಾರವು ಶೀಘ್ರವೇ ಹೊಸ ನೀತಿಯನ್ನು ಅನುಷ್ಠಾನಗೊಳಿಸಲಿದೆ ಎಂದು ಹೇಳಿದರು.</p>.<p>2029ರೊಳಗೆ ಹೊಸದಾಗಿ 2 ಲಕ್ಷ ಪ್ಯಾಕ್ಸ್ ಸ್ಥಾಪನೆಗೆ ಗುರಿ ಹೊಂದಲಾಗಿದೆ. ಈ ಸಂಘಗಳಿಗೆ 22 ಬಗೆಯ ವಹಿವಾಟು ನಡೆಸಲು ಅನುಕೂಲ ಕಲ್ಪಿಸಲಾಗುವುದು. ಇದರಿಂದ ನೋಂದಾಯಿತ ಸಂಘಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದು ತಪ್ಪಲಿದೆ. ಹೊಸ ನೀತಿಯಿಂದ ಮುಂದಿನ ದಿನಗಳಲ್ಲಿ ಯಾವುದೇ ಸಂಘವು ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದಿಲ್ಲ ಎಂದು ಭರವಸೆ ನೀಡಿದರು.</p>.<p>ಹೈನುಗಾರಿಕೆ ವಲಯದ ಬಲವರ್ಧನೆಗೆ ಸರ್ಕಾರ ಬದ್ಧವಿದೆ. ಇದಕ್ಕೆ ಪೂರಕವಾಗಿ ಸಹಕಾರ ಕಂಪನಿಯೊಂದನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ. ಇದರ ಮೂಲಕ ಐಸ್ ಕ್ರೀಮ್, ಗಿಣ್ಣು, ಪನೀರ್ ತಯಾರಿಸಲಾಗುವುದು. ಇದರಿಂದ ಹೈನುಗಾರಿಕೆ ವಲಯದ ಆರ್ಥಿಕತೆಗೆ ಉತ್ತೇಜನ ಸಿಗಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್</strong>: ನೋಂದಾಯಿತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (ಪ್ಯಾಕ್ಸ್) ಆರ್ಥಿಕ ಸಂಕಷ್ಟದ ಸುಳಿಗೆ ಸಿಲುಕುವುದನ್ನು ತಡೆಯಲು ಸರ್ಕಾರವು ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ತಿಳಿಸಿದ್ದಾರೆ.</p>.<p>ಭಾನುವಾರ ನಡೆದ ಸಹಕಾರ ಮಹಾ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪ್ಯಾಕ್ಸ್ಗಳು ಆರ್ಥಿಕವಾಗಿ ದಿವಾಳಿಯಾದರೆ ಆ ಸಮಸ್ಯೆಯ ತ್ವರಿತ ಇತ್ಯರ್ಥ ಹಾಗೂ ಅವುಗಳ ಸ್ಥಾನದಲ್ಲಿ ಹೊಸ ಪ್ಯಾಕ್ಸ್ಗಳ ನೋಂದಣಿಗೆ ಸಂಬಂಧಿಸಿದಂತೆ ಸರ್ಕಾರವು ಶೀಘ್ರವೇ ಹೊಸ ನೀತಿಯನ್ನು ಅನುಷ್ಠಾನಗೊಳಿಸಲಿದೆ ಎಂದು ಹೇಳಿದರು.</p>.<p>2029ರೊಳಗೆ ಹೊಸದಾಗಿ 2 ಲಕ್ಷ ಪ್ಯಾಕ್ಸ್ ಸ್ಥಾಪನೆಗೆ ಗುರಿ ಹೊಂದಲಾಗಿದೆ. ಈ ಸಂಘಗಳಿಗೆ 22 ಬಗೆಯ ವಹಿವಾಟು ನಡೆಸಲು ಅನುಕೂಲ ಕಲ್ಪಿಸಲಾಗುವುದು. ಇದರಿಂದ ನೋಂದಾಯಿತ ಸಂಘಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದು ತಪ್ಪಲಿದೆ. ಹೊಸ ನೀತಿಯಿಂದ ಮುಂದಿನ ದಿನಗಳಲ್ಲಿ ಯಾವುದೇ ಸಂಘವು ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದಿಲ್ಲ ಎಂದು ಭರವಸೆ ನೀಡಿದರು.</p>.<p>ಹೈನುಗಾರಿಕೆ ವಲಯದ ಬಲವರ್ಧನೆಗೆ ಸರ್ಕಾರ ಬದ್ಧವಿದೆ. ಇದಕ್ಕೆ ಪೂರಕವಾಗಿ ಸಹಕಾರ ಕಂಪನಿಯೊಂದನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ. ಇದರ ಮೂಲಕ ಐಸ್ ಕ್ರೀಮ್, ಗಿಣ್ಣು, ಪನೀರ್ ತಯಾರಿಸಲಾಗುವುದು. ಇದರಿಂದ ಹೈನುಗಾರಿಕೆ ವಲಯದ ಆರ್ಥಿಕತೆಗೆ ಉತ್ತೇಜನ ಸಿಗಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>