ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರದಿಂದ ಸಕ್ಕರೆ ಕಾರ್ಖಾನೆಗಳಿಗೆ ₹15,948 ಕೋಟಿ ನೆರವು

Published 9 ಫೆಬ್ರುವರಿ 2024, 15:51 IST
Last Updated 9 ಫೆಬ್ರುವರಿ 2024, 15:51 IST
ಅಕ್ಷರ ಗಾತ್ರ

ನವದೆಹಲಿ: ರೈತರ ಕಬ್ಬಿನ ಬಾಕಿ ಹಣ ಪಾವತಿಗೆ ಅನುಕೂಲವಾಗುವಂತೆ ದೇಶದ ಸಕ್ಕರೆ ಕಾರ್ಖಾನೆಗಳಿಗೆ ಕಳೆದ ಐದು ವರ್ಷಗಳಲ್ಲಿ ವಿವಿಧ ಯೋಜನೆಯಡಿ ₹15,948 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್‌ ಅವರು, ರಾಜ್ಯಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ.

‘ಸಕಾಲದಲ್ಲಿ ರೈತರಿಗೆ ಬಾಕಿ ಮೊತ್ತ ಪಾವತಿಸಲು ನೆರವಾಗುವಂತೆ ಕಾರ್ಖಾನೆಗಳು ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಈ ನೆರವು ಕಲ್ಪಿಸಲಾಗಿದೆ’ ಎಂದು ಹೇಳಿದ್ದಾರೆ.

ಸಕ್ಕರೆ ದಾಸ್ತಾನು, ಕಾರ್ಖಾನೆಗಳ ಮಾರುಕಟ್ಟೆ ವಿಸ್ತರಣೆ, ಸಂಸ್ಕರಣಾ ಶುಲ್ಕ, ಆಂತರಿಕ ಸಾರಿಗೆ, ಸರಕು ಸಾಗಣೆ ಸೇರಿದಂತೆ ರಫ್ತು ವೆಚ್ಚದ ನಿರ್ವಹಣೆಗಾಗಿ ಈ ನೆರವು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT