<p><strong>ನವದೆಹಲಿ:</strong> ಉತ್ತಮ ಮುಂಗಾರು ಹಾಗೂ ಅನುಕೂಲಕರ ವಾತಾವರಣದಿಂದಾಗಿ ದೇಶದಲ್ಲಿ 2024–25ನೇ ಮಾರುಕಟ್ಟೆ ವರ್ಷದಲ್ಲಿ (ಜುಲೈನಿಂದ ಜೂನ್) ಬೇಳೆಕಾಳು ಮತ್ತು ಈರುಳ್ಳಿ ಉತ್ಪಾದನೆಯಲ್ಲಿ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಆಹಾರ ಸಚಿವಾಲಯ ಶುಕ್ರವಾರ ತಿಳಿಸಿದೆ.</p>.<p>ಕಳೆದ ಮಾರುಕಟ್ಟೆ ವರ್ಷದಲ್ಲಿ 34.17 ಲಕ್ಷ ಟನ್ ತೊಗರಿ ಉತ್ಪಾದನೆಯಾಗಿತ್ತು. ಈ ಬಾರಿ 35.02 ಲಕ್ಷ ಟನ್ ಉತ್ಪಾದನೆಯಾಗುವ ನಿರೀಕ್ಷೆಯಿದೆ. ಒಟ್ಟಾರೆ ಶೇ 2.5ರಷ್ಟು ಹೆಚ್ಚಳವಾಗಲಿದೆ ಎಂದು ಹೇಳಿದೆ.</p>.<p>ಈಗಾಗಲೇ, ಕೇಂದ್ರ ಕೃಷಿ ಸಚಿವಾಲಯವು ಕನಿಷ್ಠ ಬೆಂಬಲ ಬೆಲೆ ಅಡಿ ತೊಗರಿ ಖರೀದಿಗೆ ಚಾಲನೆ ನೀಡಿದೆ.</p>.<p>ಮುಂಗಾರು ಹಂಗಾಮು ಹಾಗೂ ಮುಂಗಾರು ನಂತರದ ಅವಧಿಯಲ್ಲಿ ಬಿತ್ತಿರುವ ಈರುಳ್ಳಿ ಉತ್ಪಾದನೆ ಉತ್ತಮವಾಗಿದೆ. ಹಿಂಗಾರು ಅವಧಿಯಲ್ಲೂ ಉತ್ತಮ ಬಿತ್ತನೆಯಾಗಿದೆ ಎಂದು ಸಚಿವಾಲಯ ಹೇಳಿದೆ.</p>.<p>ದೇಶದ ಚಿಲ್ಲರೆ ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಮತ್ತು ಪೂರೈಕೆ ಮೇಲೆ ನಿಗಾ ಇಡಲಾಗಿದೆ. ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಆಹಾರ ಪದಾರ್ಥಗಳ ಪೂರೈಕೆಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದೆ.</p>.<p>ದೇಶೀಯ ಉತ್ಪಾದನೆಗೆ ಅಗತ್ಯ ಪ್ರೋತ್ಸಾಹ ನೀಡಲಾಗುತ್ತಿದೆ. ಗ್ರಾಹಕರು ಮತ್ತು ರೈತರ ಹಿತದೃಷ್ಟಿಯಿಂದ ಸಕಾಲದಲ್ಲಿ ಬೆಲೆ ನಿಯಂತ್ರಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉತ್ತಮ ಮುಂಗಾರು ಹಾಗೂ ಅನುಕೂಲಕರ ವಾತಾವರಣದಿಂದಾಗಿ ದೇಶದಲ್ಲಿ 2024–25ನೇ ಮಾರುಕಟ್ಟೆ ವರ್ಷದಲ್ಲಿ (ಜುಲೈನಿಂದ ಜೂನ್) ಬೇಳೆಕಾಳು ಮತ್ತು ಈರುಳ್ಳಿ ಉತ್ಪಾದನೆಯಲ್ಲಿ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಆಹಾರ ಸಚಿವಾಲಯ ಶುಕ್ರವಾರ ತಿಳಿಸಿದೆ.</p>.<p>ಕಳೆದ ಮಾರುಕಟ್ಟೆ ವರ್ಷದಲ್ಲಿ 34.17 ಲಕ್ಷ ಟನ್ ತೊಗರಿ ಉತ್ಪಾದನೆಯಾಗಿತ್ತು. ಈ ಬಾರಿ 35.02 ಲಕ್ಷ ಟನ್ ಉತ್ಪಾದನೆಯಾಗುವ ನಿರೀಕ್ಷೆಯಿದೆ. ಒಟ್ಟಾರೆ ಶೇ 2.5ರಷ್ಟು ಹೆಚ್ಚಳವಾಗಲಿದೆ ಎಂದು ಹೇಳಿದೆ.</p>.<p>ಈಗಾಗಲೇ, ಕೇಂದ್ರ ಕೃಷಿ ಸಚಿವಾಲಯವು ಕನಿಷ್ಠ ಬೆಂಬಲ ಬೆಲೆ ಅಡಿ ತೊಗರಿ ಖರೀದಿಗೆ ಚಾಲನೆ ನೀಡಿದೆ.</p>.<p>ಮುಂಗಾರು ಹಂಗಾಮು ಹಾಗೂ ಮುಂಗಾರು ನಂತರದ ಅವಧಿಯಲ್ಲಿ ಬಿತ್ತಿರುವ ಈರುಳ್ಳಿ ಉತ್ಪಾದನೆ ಉತ್ತಮವಾಗಿದೆ. ಹಿಂಗಾರು ಅವಧಿಯಲ್ಲೂ ಉತ್ತಮ ಬಿತ್ತನೆಯಾಗಿದೆ ಎಂದು ಸಚಿವಾಲಯ ಹೇಳಿದೆ.</p>.<p>ದೇಶದ ಚಿಲ್ಲರೆ ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಮತ್ತು ಪೂರೈಕೆ ಮೇಲೆ ನಿಗಾ ಇಡಲಾಗಿದೆ. ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಆಹಾರ ಪದಾರ್ಥಗಳ ಪೂರೈಕೆಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದೆ.</p>.<p>ದೇಶೀಯ ಉತ್ಪಾದನೆಗೆ ಅಗತ್ಯ ಪ್ರೋತ್ಸಾಹ ನೀಡಲಾಗುತ್ತಿದೆ. ಗ್ರಾಹಕರು ಮತ್ತು ರೈತರ ಹಿತದೃಷ್ಟಿಯಿಂದ ಸಕಾಲದಲ್ಲಿ ಬೆಲೆ ನಿಯಂತ್ರಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>