<p><strong>ನವದೆಹಲಿ:</strong> ಬಂಡವಾಳ ಯೋಜನೆಗಳಿಗಾಗಿ ರಾಜ್ಯ ಸರ್ಕಾರಗಳಿಗೆ 50 ವರ್ಷಗಳ ಅವಧಿಗೆ ₹12 ಸಾವಿರ ಕೋಟಿ ಬಡ್ಡಿರಹಿತ ಸಾಲ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಘೋಷಿಸಿದ್ದಾರೆ. ಆರ್ಥಿಕತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು ಮೊತ್ತದ ಪೈಕಿ ₹1,600 ಕೋಟಿ ಸಾಲವನ್ನು ಈಶಾನ್ಯ ರಾಜ್ಯಗಳಿಗೆ ಹಾಗೂ ₹900 ಕೋಟಿಯನ್ನು ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಗಳಿಗೆ ನೀಡಲಾಗುವುದು ಎಂದು ತಿಳಿಸಿದರು.</p>.<p>₹7,500 ಕೋಟಿಯನ್ನು ಉಳಿದ ರಾಜ್ಯಗಳಿಗೆ ನೀಡಲಾಗುವುದು. ಈಗಾಗಲೇ ಘೊಷಿಸಲಾಗಿರುವ ಆರ್ಥಿಕ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸುತ್ತಿರುವ ರಾಜ್ಯ ಸರ್ಕಾರಗಳಿಗೆ ₹2,000 ಕೋಟಿ ನೀಡಲಾಗುವುದು ಎಂದು ಸಚಿವೆ ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/business/commerce-news/fake-trp-case-spooks-brands-parle-and-bajaj-not-advertise-on-news-channels-that-broadcast-toxic-770162.html">ವಿಷಯುಕ್ತ ವಿಚಾರ ಹರಡುವ ನ್ಯೂಸ್ ಚಾನೆಲ್ಗಳಿಗೆ ಜಾಹೀರಾತು ಇಲ್ಲ: ಪಾರ್ಲೆ, ಬಜಾಜ್</a></p>.<p>ಸಾಲದ ಮೊತ್ತವನ್ನು ಹೊಸದಾಗಿ ಘೋಷಣೆಯಾಗಿರುವ ಅಥವಾ ಈಗಾಗಲೇ ಜಾರಿಯಲ್ಲಿರುವ ಬಂಡವಾಳ ಯೋಜನೆಗಳಿಗೆ ವಿನಿಯೋಗಿಸಬೇಕು. ಗುತ್ತಿಗೆದಾರರ, ಪೂರೈಕೆದಾರರ ಪಾವತಿಗಾಗಿ ಸಾಲದ ಮೊತ್ತವನ್ನು ಬಳಸಬಹುದು. ಆದರೆ 2021ರ ಮಾರ್ಚ್ 31ರ ಒಳಗಾಗಿ ಬಳಸಿಕೊಳ್ಳಬೇಕು ಎಂದು ಅವರು ಹೇಳಿದರು.</p>.<p>ಹೆಚ್ಚುವರಿಯಾಗಿ ಕೇಂದ್ರ ಸರ್ಕಾರದಿಂದ ₹25 ಸಾವಿರ ಕೋಟಿ ಬಂಡವಾಳ ವೆಚ್ಚವನ್ನೂ ಹಣಕಾಸು ಸಚಿವೆ ಘೋಷಿಸಿದ್ದಾರೆ. ಬಜೆಟ್ನಲ್ಲಿ ಉಲ್ಲೇಖಿಸಲಾಗಿದ್ದ ₹4.13 ಲಕ್ಷ ಕೋಟಿಗೆ ಹೆಚ್ಚುವರಿಯಾಗಿ ಇದನ್ನು ಸೇರಿಸಲಾಗಿದೆ. ಈ ಮೊತ್ತವನ್ನು ರಸ್ತೆ, ರಕ್ಷಣಾ ಮೂಲಸೌಕರ್ಯ, ನೀರು ಪೂರೈಕೆ ಮತ್ತು ನಗರಾಭಿವೃದ್ಧಿ ಯೋಜನೆಗಳಿಗೆ ಬಳಸಿಕೊಳ್ಳಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಂಡವಾಳ ಯೋಜನೆಗಳಿಗಾಗಿ ರಾಜ್ಯ ಸರ್ಕಾರಗಳಿಗೆ 50 ವರ್ಷಗಳ ಅವಧಿಗೆ ₹12 ಸಾವಿರ ಕೋಟಿ ಬಡ್ಡಿರಹಿತ ಸಾಲ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಘೋಷಿಸಿದ್ದಾರೆ. ಆರ್ಥಿಕತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು ಮೊತ್ತದ ಪೈಕಿ ₹1,600 ಕೋಟಿ ಸಾಲವನ್ನು ಈಶಾನ್ಯ ರಾಜ್ಯಗಳಿಗೆ ಹಾಗೂ ₹900 ಕೋಟಿಯನ್ನು ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಗಳಿಗೆ ನೀಡಲಾಗುವುದು ಎಂದು ತಿಳಿಸಿದರು.</p>.<p>₹7,500 ಕೋಟಿಯನ್ನು ಉಳಿದ ರಾಜ್ಯಗಳಿಗೆ ನೀಡಲಾಗುವುದು. ಈಗಾಗಲೇ ಘೊಷಿಸಲಾಗಿರುವ ಆರ್ಥಿಕ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸುತ್ತಿರುವ ರಾಜ್ಯ ಸರ್ಕಾರಗಳಿಗೆ ₹2,000 ಕೋಟಿ ನೀಡಲಾಗುವುದು ಎಂದು ಸಚಿವೆ ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/business/commerce-news/fake-trp-case-spooks-brands-parle-and-bajaj-not-advertise-on-news-channels-that-broadcast-toxic-770162.html">ವಿಷಯುಕ್ತ ವಿಚಾರ ಹರಡುವ ನ್ಯೂಸ್ ಚಾನೆಲ್ಗಳಿಗೆ ಜಾಹೀರಾತು ಇಲ್ಲ: ಪಾರ್ಲೆ, ಬಜಾಜ್</a></p>.<p>ಸಾಲದ ಮೊತ್ತವನ್ನು ಹೊಸದಾಗಿ ಘೋಷಣೆಯಾಗಿರುವ ಅಥವಾ ಈಗಾಗಲೇ ಜಾರಿಯಲ್ಲಿರುವ ಬಂಡವಾಳ ಯೋಜನೆಗಳಿಗೆ ವಿನಿಯೋಗಿಸಬೇಕು. ಗುತ್ತಿಗೆದಾರರ, ಪೂರೈಕೆದಾರರ ಪಾವತಿಗಾಗಿ ಸಾಲದ ಮೊತ್ತವನ್ನು ಬಳಸಬಹುದು. ಆದರೆ 2021ರ ಮಾರ್ಚ್ 31ರ ಒಳಗಾಗಿ ಬಳಸಿಕೊಳ್ಳಬೇಕು ಎಂದು ಅವರು ಹೇಳಿದರು.</p>.<p>ಹೆಚ್ಚುವರಿಯಾಗಿ ಕೇಂದ್ರ ಸರ್ಕಾರದಿಂದ ₹25 ಸಾವಿರ ಕೋಟಿ ಬಂಡವಾಳ ವೆಚ್ಚವನ್ನೂ ಹಣಕಾಸು ಸಚಿವೆ ಘೋಷಿಸಿದ್ದಾರೆ. ಬಜೆಟ್ನಲ್ಲಿ ಉಲ್ಲೇಖಿಸಲಾಗಿದ್ದ ₹4.13 ಲಕ್ಷ ಕೋಟಿಗೆ ಹೆಚ್ಚುವರಿಯಾಗಿ ಇದನ್ನು ಸೇರಿಸಲಾಗಿದೆ. ಈ ಮೊತ್ತವನ್ನು ರಸ್ತೆ, ರಕ್ಷಣಾ ಮೂಲಸೌಕರ್ಯ, ನೀರು ಪೂರೈಕೆ ಮತ್ತು ನಗರಾಭಿವೃದ್ಧಿ ಯೋಜನೆಗಳಿಗೆ ಬಳಸಿಕೊಳ್ಳಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>