<p><strong>ನವದೆಹಲಿ:</strong> ‘ಧಾರಣೆ ಏರುಮುಖವಾಗಿದ್ದರೂ ಆಮದಾಗಿರುವ ಈರುಳ್ಳಿ ಖರೀದಿಸಲು ರಾಜ್ಯಗಳು ಹಿಂದೇಟು ಹಾಕುತ್ತಿವೆ. ಇದು ಕೇಂದ್ರವನ್ನು ಚಿಂತೆಗೀಡು ಮಾಡಿದೆ’ ಎಂದು ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.</p>.<p>‘ಪ್ರತಿ ಕೆ.ಜಿಗೆ ₹ 55ರಂತೆ ಸಾರಿಗೆ ವೆಚ್ಚವಿಲ್ಲದೇ ಆಮದು ಈರುಳ್ಳಿಯನ್ನು ರಾಜ್ಯಗಳಿಗೆ ನೀಡಲು ಕೇಂದ್ರ ಸಿದ್ಧವಾಗಿದೆ. ಆದರೆ, ರಾಜ್ಯಗಳು ಆಸಕ್ತಿ ತೋರಿಸುತ್ತಿಲ್ಲ. ಆಮದು ಸರಕನ್ನು ಹೆಚ್ಚು ದಿನ ಇಡಲು ಬರುವುದಿಲ್ಲ. ಹೀಗಾಗಿ ಆಮದಾಗಿರುವ ಸರಕನ್ನು ಖಾಲಿ ಮಾಡುವುದು ಹೇಗೆ ಎನ್ನುವ ಚಿಂತೆ ಕಾಡುತ್ತಿದೆ’ ಎಂದಿದ್ದಾರೆ.</p>.<p>ಕಳೆದೆರಡು ತಿಂಗಳುಗಳಿಂದ ಕೆ.ಜಿಗೆ ₹ 100ನ್ನು ದಾಟಿದ್ದ ಧಾರಣೆ ಇದೀಗ ತುಸು ಇಳಿಕೆ ಕಾಣಲಾರಂಭಿಸಿದೆ. ಆಮದು ಮತ್ತು ಹೊಸ ಬೆಳೆ ಬರುತ್ತಿರುವುದು ಇದಕ್ಕೆ ಕಾರಣವಾಗಿದೆ.</p>.<p>ಆಮದಾಗಿರುವುದರ ರುಚಿ ದೇಶಿ ಈರುಳ್ಳಿಗಿಂತಲೂ ಭಿನ್ನವಾಗಿದೆ. ಜತೆಗೆ, ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಇಲ್ಲದೇ ಇರುವುದರಿಂದ ಆಮದಾಗಿರುವ ಈರುಳ್ಳಿ ಖರೀದಿಸಲು ಜನ ಮುಂದಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.</p>.<p class="Subhead"><strong>ಖರೀದಿಸಿರುವ ರಾಜ್ಯಗಳು:</strong> ಆಂಧ್ರ ಪ್ರದೇಶ, ಕೇರಳ, ತೆಲಂಗಾಣ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಧಾರಣೆ ಏರುಮುಖವಾಗಿದ್ದರೂ ಆಮದಾಗಿರುವ ಈರುಳ್ಳಿ ಖರೀದಿಸಲು ರಾಜ್ಯಗಳು ಹಿಂದೇಟು ಹಾಕುತ್ತಿವೆ. ಇದು ಕೇಂದ್ರವನ್ನು ಚಿಂತೆಗೀಡು ಮಾಡಿದೆ’ ಎಂದು ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.</p>.<p>‘ಪ್ರತಿ ಕೆ.ಜಿಗೆ ₹ 55ರಂತೆ ಸಾರಿಗೆ ವೆಚ್ಚವಿಲ್ಲದೇ ಆಮದು ಈರುಳ್ಳಿಯನ್ನು ರಾಜ್ಯಗಳಿಗೆ ನೀಡಲು ಕೇಂದ್ರ ಸಿದ್ಧವಾಗಿದೆ. ಆದರೆ, ರಾಜ್ಯಗಳು ಆಸಕ್ತಿ ತೋರಿಸುತ್ತಿಲ್ಲ. ಆಮದು ಸರಕನ್ನು ಹೆಚ್ಚು ದಿನ ಇಡಲು ಬರುವುದಿಲ್ಲ. ಹೀಗಾಗಿ ಆಮದಾಗಿರುವ ಸರಕನ್ನು ಖಾಲಿ ಮಾಡುವುದು ಹೇಗೆ ಎನ್ನುವ ಚಿಂತೆ ಕಾಡುತ್ತಿದೆ’ ಎಂದಿದ್ದಾರೆ.</p>.<p>ಕಳೆದೆರಡು ತಿಂಗಳುಗಳಿಂದ ಕೆ.ಜಿಗೆ ₹ 100ನ್ನು ದಾಟಿದ್ದ ಧಾರಣೆ ಇದೀಗ ತುಸು ಇಳಿಕೆ ಕಾಣಲಾರಂಭಿಸಿದೆ. ಆಮದು ಮತ್ತು ಹೊಸ ಬೆಳೆ ಬರುತ್ತಿರುವುದು ಇದಕ್ಕೆ ಕಾರಣವಾಗಿದೆ.</p>.<p>ಆಮದಾಗಿರುವುದರ ರುಚಿ ದೇಶಿ ಈರುಳ್ಳಿಗಿಂತಲೂ ಭಿನ್ನವಾಗಿದೆ. ಜತೆಗೆ, ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಇಲ್ಲದೇ ಇರುವುದರಿಂದ ಆಮದಾಗಿರುವ ಈರುಳ್ಳಿ ಖರೀದಿಸಲು ಜನ ಮುಂದಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.</p>.<p class="Subhead"><strong>ಖರೀದಿಸಿರುವ ರಾಜ್ಯಗಳು:</strong> ಆಂಧ್ರ ಪ್ರದೇಶ, ಕೇರಳ, ತೆಲಂಗಾಣ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>