ನವದೆಹಲಿ (ಪಿಟಿಐ): ಐಸಿಐಸಿಐ ಬ್ಯಾಂಕ್–ವಿಡಿಯೊಕಾನ್ ಹಗರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ನ ಸಿಇಒ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್, ವಿಡಿಯೊಕಾನ್ ಸಮೂಹದ ಪ್ರವರ್ತಕ ವೇಣುಗೋಪಾಲ್ ಧೂತ್ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಕ್ರಿಮಿನಲ್ ಪ್ರಕರಣ ದಾಖಲಿಸಿದೆ.
ವಿಡಿಯೊಕಾನ್ ಸಮೂಹಕ್ಕೆ ₹ 1,875 ಕೋಟಿ ಸಾಲ ಮಂಜೂರಾ ತಿಯಲ್ಲಿ ಅಕ್ರಮ ಎಸಗಿರುವು ದಕ್ಕೆ ಸಂಬಂಧಿಸಿ ದಂತೆ ಸಿಬಿಐ ದೂರು ದಾಖಲಿಸಿದೆ. ಇದನ್ನು ಪರಿಗಣಿಸಿ ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ (ಪಿಎಂಎಲ್ಎ) ಈ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ.
ಜಾರಿ ನಿರ್ದೇಶನಾಲಯ ಶೀಘ್ರವೇ ಆಪಾದಿತರಿಗೆ ಸಮನ್ಸ್ ಜಾರಿ ಮಾಡುವ ನಿರೀಕ್ಷೆ ಇದೆ ಎಂದೂ ಹೇಳಿದ್ದಾರೆ.