<p><strong>ಬೆಂಗಳೂರು</strong>: ಇಂಧನ ಕ್ಷೇತ್ರದ ಸಂಶೋಧನಾ ಸಂಸ್ಥೆ ಷೆರ್ವನ್ ಬೆಂಗಳೂರಿನಲ್ಲಿ ₹8,300 ಕೋಟಿ ಬಂಡವಾಳ ಹೂಡಿಕೆ ಮಾಡಲಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.</p>.<p>ಷೆರ್ವನ್ ಇಂಡಿಯಾ ಮುಖ್ಯಸ್ಥ ಅಕ್ಷಯ್ ಸಾಹ್ನಿ ಮತ್ತು ಪ್ರಧಾನ ವ್ಯವಸ್ಥಾಪಕಿ ಕೇಟ್ ಕಲಘನ್ ಜತೆಗೆ, ಶುಕ್ರವಾರ ನಡೆದ ಸಭೆಯ ನಂತರ ಅವರು ಈ ಮಾಹಿತಿ ನೀಡಿದ್ದಾರೆ.</p>.<p>‘ರಾಜ್ಯ ಸರ್ಕಾರದ ಸಹಯೋಗದಡಿ ಕಂಪನಿಯು ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಶ್ರೇಷ್ಠತಾ ಕೇಂದ್ರ ಸ್ಥಾಪಿಸಲಿದೆ’ ಎಂದು ತಿಳಿಸಿದ್ದಾರೆ.</p>.<p>‘ಈ ಕೇಂದ್ರದ ಮೂಲಕ ಇಂಧನ ವ್ಯವಸ್ಥೆಯ ತಂತ್ರಜ್ಞಾನದ ಆವಿಷ್ಕಾರಗಳಿಗೆ ಒತ್ತು ನೀಡಲು ನಿರ್ಧರಿಸಲಾಗಿದೆ. ಎಂಜಿನಿಯರಿಂಗ್ ಮತ್ತು ಡಿಜಿಟಲ್ ಸೇವೆಗೆ ಸಂಬಂಧಿಸಿದಂತೆ 2025ರೊಳಗೆ 600 ತಂತ್ರಜ್ಞರನ್ನು ನೇಮಕ ಮಾಡಿಕೊಳ್ಳಲಾಗುವುದು. ಸರ್ಕಾರವು ತಾಂತ್ರಿಕ ಆವಿಷ್ಕಾರಕ್ಕೆ ಪೂರಕವಾದ ವಾತಾವರಣ ಸೃಷ್ಟಿಗೆ ಒತ್ತು ನೀಡಲಿದೆ’ ಎಂದು ಹೇಳಿದ್ದಾರೆ.</p>.<p>ಈಗಾಗಲೇ, ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ) ಇವೆ. ಹಣಕಾಸು, ಆರೋಗ್ಯ, ರಿಟೇಲ್ ವ್ಯಾಪಾರ, ತಯಾರಿಕಾ ವಲಯ ಸೇರಿ ಭಾರತದ ಜಿಸಿಸಿಗಳಲ್ಲಿ ಶೇ 30ಕ್ಕಿಂತ ಹೆಚ್ಚು ಪಾಲನ್ನು ಬೆಂಗಳೂರು ಹೊಂದಿದೆ’ ಎಂದು ವಿವರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಇಂಧನ ಕ್ಷೇತ್ರದ ಸಂಶೋಧನಾ ಸಂಸ್ಥೆ ಷೆರ್ವನ್ ಬೆಂಗಳೂರಿನಲ್ಲಿ ₹8,300 ಕೋಟಿ ಬಂಡವಾಳ ಹೂಡಿಕೆ ಮಾಡಲಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.</p>.<p>ಷೆರ್ವನ್ ಇಂಡಿಯಾ ಮುಖ್ಯಸ್ಥ ಅಕ್ಷಯ್ ಸಾಹ್ನಿ ಮತ್ತು ಪ್ರಧಾನ ವ್ಯವಸ್ಥಾಪಕಿ ಕೇಟ್ ಕಲಘನ್ ಜತೆಗೆ, ಶುಕ್ರವಾರ ನಡೆದ ಸಭೆಯ ನಂತರ ಅವರು ಈ ಮಾಹಿತಿ ನೀಡಿದ್ದಾರೆ.</p>.<p>‘ರಾಜ್ಯ ಸರ್ಕಾರದ ಸಹಯೋಗದಡಿ ಕಂಪನಿಯು ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಶ್ರೇಷ್ಠತಾ ಕೇಂದ್ರ ಸ್ಥಾಪಿಸಲಿದೆ’ ಎಂದು ತಿಳಿಸಿದ್ದಾರೆ.</p>.<p>‘ಈ ಕೇಂದ್ರದ ಮೂಲಕ ಇಂಧನ ವ್ಯವಸ್ಥೆಯ ತಂತ್ರಜ್ಞಾನದ ಆವಿಷ್ಕಾರಗಳಿಗೆ ಒತ್ತು ನೀಡಲು ನಿರ್ಧರಿಸಲಾಗಿದೆ. ಎಂಜಿನಿಯರಿಂಗ್ ಮತ್ತು ಡಿಜಿಟಲ್ ಸೇವೆಗೆ ಸಂಬಂಧಿಸಿದಂತೆ 2025ರೊಳಗೆ 600 ತಂತ್ರಜ್ಞರನ್ನು ನೇಮಕ ಮಾಡಿಕೊಳ್ಳಲಾಗುವುದು. ಸರ್ಕಾರವು ತಾಂತ್ರಿಕ ಆವಿಷ್ಕಾರಕ್ಕೆ ಪೂರಕವಾದ ವಾತಾವರಣ ಸೃಷ್ಟಿಗೆ ಒತ್ತು ನೀಡಲಿದೆ’ ಎಂದು ಹೇಳಿದ್ದಾರೆ.</p>.<p>ಈಗಾಗಲೇ, ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ) ಇವೆ. ಹಣಕಾಸು, ಆರೋಗ್ಯ, ರಿಟೇಲ್ ವ್ಯಾಪಾರ, ತಯಾರಿಕಾ ವಲಯ ಸೇರಿ ಭಾರತದ ಜಿಸಿಸಿಗಳಲ್ಲಿ ಶೇ 30ಕ್ಕಿಂತ ಹೆಚ್ಚು ಪಾಲನ್ನು ಬೆಂಗಳೂರು ಹೊಂದಿದೆ’ ಎಂದು ವಿವರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>