<p><strong>ಬೆಂಗಳೂರು</strong>: ‘ಕಂಪನಿಗಳಿಗೆ ಸಲಹೆ ನೀಡುವುದಷ್ಟೇ ಅಲ್ಲದೆ, ಕಂಪನಿಯನ್ನು ಮುನ್ನಡೆಸುವಂತಹ ಕೆಲಸವನ್ನು ಕಂಪನಿ ಸೆಕ್ರೆಟರಿಗಳು (ಸಿ.ಎಸ್.) ಮಾಡಬೇಕು. ಯಾವುದೇ ಪ್ರಮುಖ ನಿರ್ಧಾರಗಳಲ್ಲಿ ಕಂಪನಿ ಸೆಕ್ರೆಟರಿಗಳ ಪಾತ್ರ ಮುಖ್ಯವಾಗಿರಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ನಡೆದ ಕಂಪನಿ ಸೆಕ್ರೆಟರಿಗಳ 49ನೇ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಅವರು, ‘ಕಂಪನಿ ಸೆಕ್ರೆಟರಿಗಳು ದೇಶದ ಆರ್ಥಿಕ ನೀತಿ ರೂಪಿಸುವಲ್ಲಿ ಭಾಗವಹಿಸುವಿಕೆಯ ಅಗತ್ಯ ಇದೆ’ ಎಂದರು.</p>.<p>ಆನ್ಲೈನ್ ಮೂಲಕ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಸಂಘಟಿತ ಮತ್ತು ಅಸಂಘಟಿತ ವಲಯಗಳನ್ನು ಒಗ್ಗೂಡಿಸಲು ಕಂಪನಿ ಸೆಕ್ರೆಟರಿಗಳು ಪ್ರಮುಖ ಪಾತ್ರವಹಿಸಬೇಕು ಎಂದು ಕರೆ ನೀಡಿದರು.</p>.<p>‘ಎರಡು ದಶಕಗಳ ನಂತರ ಬೆಂಗಳೂರಿನಲ್ಲಿ ಇಂತಹ ಉತ್ತಮ ಸಮಾವೇಶ ನಡೆಯುತ್ತಿದೆ. ತಾಂತ್ರಿಕ ವಿಚಾರಗೋಷ್ಠಿಗಳು ಹೊಸ ಅವಕಾಶಗಳನ್ನು ಸೃಷ್ಟಿಸಲು ನೆರವಾಗಲಿವೆ’ ಎಂದುಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ (ಐಸಿಎಸ್ಐ) ಅಧ್ಯಕ್ಷ ಸಿ.ಎಸ್. ನಾಗೇಂಧ್ರ ಡಿ. ರಾವ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕಂಪನಿಗಳಿಗೆ ಸಲಹೆ ನೀಡುವುದಷ್ಟೇ ಅಲ್ಲದೆ, ಕಂಪನಿಯನ್ನು ಮುನ್ನಡೆಸುವಂತಹ ಕೆಲಸವನ್ನು ಕಂಪನಿ ಸೆಕ್ರೆಟರಿಗಳು (ಸಿ.ಎಸ್.) ಮಾಡಬೇಕು. ಯಾವುದೇ ಪ್ರಮುಖ ನಿರ್ಧಾರಗಳಲ್ಲಿ ಕಂಪನಿ ಸೆಕ್ರೆಟರಿಗಳ ಪಾತ್ರ ಮುಖ್ಯವಾಗಿರಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ನಡೆದ ಕಂಪನಿ ಸೆಕ್ರೆಟರಿಗಳ 49ನೇ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಅವರು, ‘ಕಂಪನಿ ಸೆಕ್ರೆಟರಿಗಳು ದೇಶದ ಆರ್ಥಿಕ ನೀತಿ ರೂಪಿಸುವಲ್ಲಿ ಭಾಗವಹಿಸುವಿಕೆಯ ಅಗತ್ಯ ಇದೆ’ ಎಂದರು.</p>.<p>ಆನ್ಲೈನ್ ಮೂಲಕ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಸಂಘಟಿತ ಮತ್ತು ಅಸಂಘಟಿತ ವಲಯಗಳನ್ನು ಒಗ್ಗೂಡಿಸಲು ಕಂಪನಿ ಸೆಕ್ರೆಟರಿಗಳು ಪ್ರಮುಖ ಪಾತ್ರವಹಿಸಬೇಕು ಎಂದು ಕರೆ ನೀಡಿದರು.</p>.<p>‘ಎರಡು ದಶಕಗಳ ನಂತರ ಬೆಂಗಳೂರಿನಲ್ಲಿ ಇಂತಹ ಉತ್ತಮ ಸಮಾವೇಶ ನಡೆಯುತ್ತಿದೆ. ತಾಂತ್ರಿಕ ವಿಚಾರಗೋಷ್ಠಿಗಳು ಹೊಸ ಅವಕಾಶಗಳನ್ನು ಸೃಷ್ಟಿಸಲು ನೆರವಾಗಲಿವೆ’ ಎಂದುಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ (ಐಸಿಎಸ್ಐ) ಅಧ್ಯಕ್ಷ ಸಿ.ಎಸ್. ನಾಗೇಂಧ್ರ ಡಿ. ರಾವ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>