ಬ್ಯಾಡಗಿ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸೋಮವಾರ (ಮಾ.16) ಎಂದಿನಂತೆ ವಹಿವಾಟು ನಡೆಸಲಿದೆ.
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾರ್ಚ್ 23 ರವರೆಗೆ ನಡೆಯುವ ಕಾರ್ಯಕ್ರಮಗಳನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಆದರೆ ಇಲ್ಲಿಯ ಎಪಿಎಂಸಿ ಎಂದಿನಂತೆ ವಹಿವಾಟು ನಡೆಸಲಿದ್ದು, ರೈತರು ಮೆಣಸಿನಕಾಯಿ ಮಾರಾಟಕ್ಕೆ ತರುವಂತೆ’ ಎಪಿಎಂಸಿ ಕಾರ್ಯದರ್ಶಿ ಎಸ್.ಬಿ.ನ್ಯಾಮಗೌಡ ಅವರು ತಿಳಿಸಿದ್ದಾರೆ.