<p><strong>ನವದೆಹಲಿ:</strong> ಉದ್ದೇಶ ಪೂರ್ವಕ ಸುಸ್ತಿದಾರರ ಹೆಸರು ಬಹಿರಂಗಪಡಿಸುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನ ಆದೇಶ ಗೌರವಿಸದ ಕಾರಣಕ್ಕೆ ಕೇಂದ್ರ ಮಾಹಿತಿ ಆಯೋಗವು (ಸಿಐಸಿ), ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಉರ್ಜಿತ್ ಪಟೇಲ್ ಅವರಿಗೆ ಷೋಕಾಸ್ ನೋಟಿಸ್ ಜಾರಿ ಮಾಡಿದೆ.</p>.<p>ವಸೂಲಾಗದ ಸಾಲಗಳ ಬಗ್ಗೆ ಆರ್ಬಿಐನ ಹಿಂದಿನ ಗವರ್ನರ್ ರಘುರಾಂ ರಾಜನ್ ಅವರು ಬರೆದಿರುವ ಪತ್ರವನ್ನು ಬಹಿರಂಗಪಡಿಸು<br />ವಂತೆಯೂ ‘ಸಿಐಸಿ’ಯು, ಪ್ರಧಾನಿ ಕಚೇರಿ (ಪಿಎಂಒ), ಹಣಕಾಸು ಸಚಿವಾಲಯ ಮತ್ತು ಆರ್ಬಿಐಗೆ ಕೇಳಿಕೊಂಡಿದೆ.</p>.<p>ಸುಪ್ರೀಂಕೋರ್ಟ್ನ ಆದೇಶದ ಹೊರತಾಗಿಯೂ ₹ 50 ಕೋಟಿಗಿಂತ ಹೆಚ್ಚಿನ ಮೊತ್ತದ ಸಾಲ ಪಡೆದ ಉದ್ದೇಶಪೂರ್ವಕ ಸುಸ್ತಿದಾರರ ಹೆಸರುಗಳನ್ನು ಬಹಿರಂಗಪಡಿಸದ ಮತ್ತು ಕೋರ್ಟ್ ಆದೇಶ ಗೌರವಿಸಿದ ಕಾರಣಕ್ಕೆ ನಿಮಗೆ ಗರಿಷ್ಠ ಮೊತ್ತದ ದಂಡವನ್ನೇಕೆ ವಿಧಿಸಬಾರದು ? ಇದಕ್ಕೆ ವಿವರಣೆ ನೀಡಿ ಎಂದು ‘ಸಿಐಸಿ’,ಉರ್ಜಿತ್ ಪಟೇಲ್ ಅವರನ್ನು ಕೇಳಿದೆ.</p>.<p>ಉದ್ದೇಶಪೂರ್ವಕ ಸುಸ್ತಿದಾರರ ಹೆಸರುಗಳನ್ನು ಆರ್ಬಿಐ ಬಹಿರಂಗಪಡಿಸಬೇಕು ಎಂದು ಹಿಂದಿನ ಮಾಹಿತಿ ಆಯುಕ್ತ ಶೈಲೇಂದ್ರ ಗಾಂಧಿ ಅವರು ಕೈಗೊಂಡಿದ್ದ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿತ್ತು.</p>.<p>ಮಾಹಿತಿ ಹಕ್ಕು ಕಾಯ್ದೆಗೆ (ಆರ್ಟಿಐ) ಸಂಬಂಧಿಸಿದಂತೆ ಆರ್ಬಿಐ ಪ್ರತಿಪಾದಿಸುವ ಧೋರಣೆಗೂ, ಗವರ್ನರ್ ಮತ್ತು ಡೆಪ್ಯುಟಿ ಗವರ್ನರ್ ಹೇಳಿಕೆಗಳಿಗೂ ತಾಳೆಯಾಗುತ್ತಿಲ್ಲ ಎಂದು ಆಯೋಗವು ಅಭಿಪ್ರಾಯಪಟ್ಟಿದೆ.</p>.<p>‘ಕೋರ್ಟ್ ಆದೇಶ ಪಾಲಿಸದ ಕಾರಣಕ್ಕೆ ಇದೇ 16ರ ಒಳಗೆ ಗರಿಷ್ಠ ದಂಡವನ್ನೇಕೆ ವಿಧಿಸಬಾರದು ಎಂದು ಪಟೇಲ್ ಅವರಿಗೆ ನೀಡಿದ ನೋಟಿಸ್ನಲ್ಲಿ ಕೇಳಲಾಗಿದೆ’ ಎಂದು ಮಾಹಿತಿ ಆಯುಕ್ತ ಶ್ರೀಧರ್ ಆಚಾರ್ಯುಲು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉದ್ದೇಶ ಪೂರ್ವಕ ಸುಸ್ತಿದಾರರ ಹೆಸರು ಬಹಿರಂಗಪಡಿಸುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನ ಆದೇಶ ಗೌರವಿಸದ ಕಾರಣಕ್ಕೆ ಕೇಂದ್ರ ಮಾಹಿತಿ ಆಯೋಗವು (ಸಿಐಸಿ), ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಉರ್ಜಿತ್ ಪಟೇಲ್ ಅವರಿಗೆ ಷೋಕಾಸ್ ನೋಟಿಸ್ ಜಾರಿ ಮಾಡಿದೆ.</p>.<p>ವಸೂಲಾಗದ ಸಾಲಗಳ ಬಗ್ಗೆ ಆರ್ಬಿಐನ ಹಿಂದಿನ ಗವರ್ನರ್ ರಘುರಾಂ ರಾಜನ್ ಅವರು ಬರೆದಿರುವ ಪತ್ರವನ್ನು ಬಹಿರಂಗಪಡಿಸು<br />ವಂತೆಯೂ ‘ಸಿಐಸಿ’ಯು, ಪ್ರಧಾನಿ ಕಚೇರಿ (ಪಿಎಂಒ), ಹಣಕಾಸು ಸಚಿವಾಲಯ ಮತ್ತು ಆರ್ಬಿಐಗೆ ಕೇಳಿಕೊಂಡಿದೆ.</p>.<p>ಸುಪ್ರೀಂಕೋರ್ಟ್ನ ಆದೇಶದ ಹೊರತಾಗಿಯೂ ₹ 50 ಕೋಟಿಗಿಂತ ಹೆಚ್ಚಿನ ಮೊತ್ತದ ಸಾಲ ಪಡೆದ ಉದ್ದೇಶಪೂರ್ವಕ ಸುಸ್ತಿದಾರರ ಹೆಸರುಗಳನ್ನು ಬಹಿರಂಗಪಡಿಸದ ಮತ್ತು ಕೋರ್ಟ್ ಆದೇಶ ಗೌರವಿಸಿದ ಕಾರಣಕ್ಕೆ ನಿಮಗೆ ಗರಿಷ್ಠ ಮೊತ್ತದ ದಂಡವನ್ನೇಕೆ ವಿಧಿಸಬಾರದು ? ಇದಕ್ಕೆ ವಿವರಣೆ ನೀಡಿ ಎಂದು ‘ಸಿಐಸಿ’,ಉರ್ಜಿತ್ ಪಟೇಲ್ ಅವರನ್ನು ಕೇಳಿದೆ.</p>.<p>ಉದ್ದೇಶಪೂರ್ವಕ ಸುಸ್ತಿದಾರರ ಹೆಸರುಗಳನ್ನು ಆರ್ಬಿಐ ಬಹಿರಂಗಪಡಿಸಬೇಕು ಎಂದು ಹಿಂದಿನ ಮಾಹಿತಿ ಆಯುಕ್ತ ಶೈಲೇಂದ್ರ ಗಾಂಧಿ ಅವರು ಕೈಗೊಂಡಿದ್ದ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿತ್ತು.</p>.<p>ಮಾಹಿತಿ ಹಕ್ಕು ಕಾಯ್ದೆಗೆ (ಆರ್ಟಿಐ) ಸಂಬಂಧಿಸಿದಂತೆ ಆರ್ಬಿಐ ಪ್ರತಿಪಾದಿಸುವ ಧೋರಣೆಗೂ, ಗವರ್ನರ್ ಮತ್ತು ಡೆಪ್ಯುಟಿ ಗವರ್ನರ್ ಹೇಳಿಕೆಗಳಿಗೂ ತಾಳೆಯಾಗುತ್ತಿಲ್ಲ ಎಂದು ಆಯೋಗವು ಅಭಿಪ್ರಾಯಪಟ್ಟಿದೆ.</p>.<p>‘ಕೋರ್ಟ್ ಆದೇಶ ಪಾಲಿಸದ ಕಾರಣಕ್ಕೆ ಇದೇ 16ರ ಒಳಗೆ ಗರಿಷ್ಠ ದಂಡವನ್ನೇಕೆ ವಿಧಿಸಬಾರದು ಎಂದು ಪಟೇಲ್ ಅವರಿಗೆ ನೀಡಿದ ನೋಟಿಸ್ನಲ್ಲಿ ಕೇಳಲಾಗಿದೆ’ ಎಂದು ಮಾಹಿತಿ ಆಯುಕ್ತ ಶ್ರೀಧರ್ ಆಚಾರ್ಯುಲು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>