ಜಾಗತಿಕ ಆರ್ಥಿಕತೆಯಲ್ಲಿ ಉಂಟಾಗಿರುವ ಅನಿಶ್ಚಿತ ಸ್ಥಿತಿ ಹಾಗೂ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಬಂಡವಾಳ ಹಿಂದಕ್ಕೆ ಪಡೆಯುತ್ತಿರುವುದನ್ನು ಗಮನಲ್ಲಿ ಇಟ್ಟುಕೊಂಡು ಮಾತನಾಡಿದ ಅವರು, ‘ಆರ್ಥಿಕತೆಯ ಚೇತರಿಕೆಗಾಗಿ ಭಾರತವು ತನ್ನ ವಿದೇಶಿ ವಿನಿಮಯ ಮೀಸಲು ಹೆಚ್ಚಿಸಿಕೊಳ್ಳುವ ಅಗತ್ಯ ಇದೆ’ ಎಂದು ಅಭಿಪ್ರಾಯಪಟ್ಟರು.