ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಪ್ರಮಾಣದ (ಎಂಎಸ್ಎಂಇ) ಉದ್ದಿಮೆಗಳು ಸೇರಿದಂತೆ ಎಲ್ಲ ವರ್ಗಗಳಿಗೆ ಸೇರಿದ ಕಂಪನಿಗಳಿಗೆ ಬರಬೇಕಿರುವ ಹಣವು ಸಕಾಲದಲ್ಲಿ ಪಾವತಿ ಆಗಬೇಕು, ಮೂಲಸೌಕರ್ಯಕ್ಕೆ ಸಂಬಂಧಿಸಿದ ಕಾಮಗಾರಿಗಳು ವೇಗ ಪಡೆದುಕೊಳ್ಳಬೇಕು, ತುರ್ತು ಸಾಲ ಖಾತರಿ ಯೋಜನೆಯ ಮೊತ್ತವನ್ನು ₹ 5 ಲಕ್ಷ ಕೋಟಿಗೆ ಹೆಚ್ಚಿಸಬೇಕು, ತೈಲೋತ್ಪನ್ನಗಳ ಮೇಲಿನ ಎಕ್ಸೈಸ್ ಸುಂಕವನ್ನು ತಗ್ಗಿಸಬೇಕು, ತೈಲೋತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರಬೇಕು ಎಂದು ನರೇಂದ್ರನ್ ಅವರು ಒತ್ತಾಯಿಸಿದರು.