<p><strong>ಕೋಲ್ಕತ್ತ</strong>: ಭಾರತೀಯ ಕಲ್ಲಿದ್ದಲು ನಿಗಮವು (ಸಿಐಎಲ್) ಕಳೆದ ಒಂದು ದಶಕದ ಅವಧಿಯಲ್ಲಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್ಆರ್) ₹5,570 ಕೋಟಿ ವೆಚ್ಚ ಮಾಡಿದೆ ಎಂದು ನಿಗಮದ ಅಧ್ಯಕ್ಷ ಪಿ.ಎಂ. ಪ್ರಸಾದ್ ತಿಳಿಸಿದ್ದಾರೆ.</p>.<p>ಭಾನುವಾರ ನಡೆದ ನಿಗಮದ 3ನೇ ಸಿಎಸ್ಆರ್ ನಿಧಿ ಹಂಚಿಕೆ ಸಭೆಯಲ್ಲಿ ಮಾತನಾಡಿದ ಅವರು, ಈ ನಿಧಿಯಡಿ ಶಿಕ್ಷಣ, ಆರೋಗ್ಯ, ಕೌಶಲ ಅಭಿವೃದ್ಧಿ, ಕ್ರೀಡೆ ಮತ್ತು ಮಹಿಳಾ ಸಬಲೀಕರಣಕ್ಕೆ ಹಣ ವಿನಿಯೋಗಿಸಲಾಗಿದೆ ಎಂದರು.</p>.<p>ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಮಾತನಾಡಿ, ‘ಬುಡಕಟ್ಟು ಜನರು ಮತ್ತು ಕಲ್ಲಿದ್ದಲು ಗಣಿ ಪ್ರದೇಶದ ನಾಗರಿಕರ ಜೀವನಮಟ್ಟದ ಸುಧಾರಣೆಗೆ ಸಿಎಸ್ಆರ್ ಹಣವು ನೆರವಾಗಿದೆ’ ಎಂದು ಹೇಳಿದರು.</p>.<p>ಕಲ್ಲಿದ್ದಲು ಸಚಿವಾಲಯದ ಕಾರ್ಯದರ್ಶಿ ವಿಕ್ರಮ್ ದೇವ್ ದತ್ ಮಾತನಾಡಿ, ಕಲ್ಲಿದ್ದಲು ಕಂಪನಿಗಳ ಸಿಎಸ್ಆರ್ ನಿಧಿಯಡಿ ಕಳೆದ ಒಂದು ದಶಕದಲ್ಲಿ ಹಮ್ಮಿಕೊಂಡಿರುವ ಯೋಜನೆಗಳು ಅರ್ಥಪೂರ್ಣವಾಗಿವೆ. ಕಲ್ಲಿದ್ದಲು ಗಣಿ ಪ್ರದೇಶದ ಜನರ ಅಭಿವೃದ್ಧಿ ಚಟುವಟಿಕೆಗಳಿಗೆ ವರದಾನವಾಗಿವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಭಾರತೀಯ ಕಲ್ಲಿದ್ದಲು ನಿಗಮವು (ಸಿಐಎಲ್) ಕಳೆದ ಒಂದು ದಶಕದ ಅವಧಿಯಲ್ಲಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್ಆರ್) ₹5,570 ಕೋಟಿ ವೆಚ್ಚ ಮಾಡಿದೆ ಎಂದು ನಿಗಮದ ಅಧ್ಯಕ್ಷ ಪಿ.ಎಂ. ಪ್ರಸಾದ್ ತಿಳಿಸಿದ್ದಾರೆ.</p>.<p>ಭಾನುವಾರ ನಡೆದ ನಿಗಮದ 3ನೇ ಸಿಎಸ್ಆರ್ ನಿಧಿ ಹಂಚಿಕೆ ಸಭೆಯಲ್ಲಿ ಮಾತನಾಡಿದ ಅವರು, ಈ ನಿಧಿಯಡಿ ಶಿಕ್ಷಣ, ಆರೋಗ್ಯ, ಕೌಶಲ ಅಭಿವೃದ್ಧಿ, ಕ್ರೀಡೆ ಮತ್ತು ಮಹಿಳಾ ಸಬಲೀಕರಣಕ್ಕೆ ಹಣ ವಿನಿಯೋಗಿಸಲಾಗಿದೆ ಎಂದರು.</p>.<p>ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಮಾತನಾಡಿ, ‘ಬುಡಕಟ್ಟು ಜನರು ಮತ್ತು ಕಲ್ಲಿದ್ದಲು ಗಣಿ ಪ್ರದೇಶದ ನಾಗರಿಕರ ಜೀವನಮಟ್ಟದ ಸುಧಾರಣೆಗೆ ಸಿಎಸ್ಆರ್ ಹಣವು ನೆರವಾಗಿದೆ’ ಎಂದು ಹೇಳಿದರು.</p>.<p>ಕಲ್ಲಿದ್ದಲು ಸಚಿವಾಲಯದ ಕಾರ್ಯದರ್ಶಿ ವಿಕ್ರಮ್ ದೇವ್ ದತ್ ಮಾತನಾಡಿ, ಕಲ್ಲಿದ್ದಲು ಕಂಪನಿಗಳ ಸಿಎಸ್ಆರ್ ನಿಧಿಯಡಿ ಕಳೆದ ಒಂದು ದಶಕದಲ್ಲಿ ಹಮ್ಮಿಕೊಂಡಿರುವ ಯೋಜನೆಗಳು ಅರ್ಥಪೂರ್ಣವಾಗಿವೆ. ಕಲ್ಲಿದ್ದಲು ಗಣಿ ಪ್ರದೇಶದ ಜನರ ಅಭಿವೃದ್ಧಿ ಚಟುವಟಿಕೆಗಳಿಗೆ ವರದಾನವಾಗಿವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>