<p><strong>ಬೆಂಗಳೂರು</strong>: ಆಸ್ತಿ ನೋಂದಣಿಗೆ ಇ-ಖಾತಾ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಅತಿಸಣ್ಣ ಮತ್ತು ಸಣ್ಣ ಕೈಗಾರಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಕೂಡಲೇ, ರಾಜ್ಯ ಸರ್ಕಾರವು ಈ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಒತ್ತಾಯಿಸಿದೆ.</p>.<p>ಶುಕ್ರವಾರ ನಡೆದ 2025–26ನೇ ಸಾಲಿನ ರಾಜ್ಯ ಬಜೆಟ್ ಪೂರ್ವ ಸಮಾಲೋಚನೆ ಸಭೆಯಲ್ಲಿ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಸಿಯಾ ಅಧ್ಯಕ್ಷ ಎಂ.ಜಿ. ರಾಜಗೋಪಾಲ್ ಮನವಿ ಪತ್ರ ಸಲ್ಲಿಸಿದರು.</p>.<p>ತಂತ್ರಾಂಶ ದೋಷದಿಂದಾಗಿ ಇ-ಖಾತಾದಲ್ಲಿನ ಲೋಪದೋಷ ಸರಿಪಡಿಸಲು ಬಹಳ ತಡವಾಗುತ್ತಿದೆ. ಇದನ್ನು ಸರಿಪಡಿಸಿದ ಇ-ಖಾತಾ ಪಡೆಯಲು ವಿಳಂಬವಾಗುತ್ತಿದೆ. ಬ್ಯಾಂಕ್ಗಳು ಮತ್ತು ಇತರೆ ಹಣಕಾಸು ಸಂಸ್ಥೆಗಳು ನೋಂದಾಯಿಸಲು ಸಾಧ್ಯವಾಗದ ಸ್ವತ್ತುಗಳ ಮೇಲೆ ಸಾಲ ನೀಡಲು ನಿರಾಕರಿಸುತ್ತಿವೆ ಎಂದು ಗಮನ ಸೆಳೆದರು.</p>.<p>ಬಹಳಷ್ಟು ಕೈಗಾರಿಕೆಗಳು ಕಂದಾಯ ನಿವೇಶನಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಈ ಕಟ್ಟಡಗಳು ಸಕ್ಷಮ ಪ್ರಾಧಿಕಾರಿಗಳಿಂದ ಯೋಜನೆಗಳಿಗೆ ಭೂ ಪರಿವರ್ತನೆ ಅಥವಾ ನಕ್ಷೆ ಅನುಮೋದನೆ ಪಡೆದಿಲ್ಲ. ಖಾತಾ ನೀಡುವುದು ನಿವೇಶನಕ್ಕೆ ಹೊರತು ಕಟ್ಟಡಕ್ಕಲ್ಲ ಎಂಬ ಅಂಶವನ್ನು ಪರಿಗಣಿಸಿ ರಾಜ್ಯವನ್ನು ಉದ್ಯಮ ಸ್ನೇಹಿಯಾಗಿ ಮಾಡಲು ನಿಟ್ಟಿನಲ್ಲಿ ಇಂತಹ ನಿಯಮಗಳನ್ನು ಪರಿಷ್ಕರಿಸಬೇಕಿದೆ ಎಂದರು.</p>.<p>ಪಂಚಾಯಿತಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಮಾರ್ಗಸೂಚಿ ದರಗಳ ಆಧಾರದ ಮೇಲೆ ನಿಗದಿಪಡಿಸಲಾಗುತ್ತಿದೆ. ಈ ವ್ಯವಸ್ಥೆಯು ಅವೈಜ್ಞಾನಿಕವಾಗಿದೆ. ಇದನ್ನು ಬಿಬಿಎಂಪಿಯಂತೆ ಯೂನಿಟ್ ಏರಿಯಾ ವ್ಯಾಲ್ಯೂ (ಯುಎವಿ) ಆಧಾರದ ತೆರಿಗೆ ನಿಗದಿಪಡಿಸಬೇಕಿದೆ ಎಂದು ಮನವಿ ಮಾಡಿದರು.</p>.<p>ಕೈಗಾರಿಕಾ ಪ್ರದೇಶಗಳಲ್ಲಿ ಸಂಗ್ರಹಿಸುವ ಆಸ್ತಿ ತೆರಿಗೆಯ ಶೇ 70ರಷ್ಟನ್ನು ಕೈಗಾರಿಕಾ ಮೂಲಸೌಕರ್ಯದ ಅಭಿವೃದ್ಧಿಗೆ ಮೀಸಲಿಡಬೇಕು. ಕಾಸಿಯಾದ ಶ್ರೇಷ್ಠತಾ ಹಾಗೂ ಅನ್ವೇಷಣಾ ಕೇಂದ್ರದ ಕಾಮಗಾರಿ ಪೂರ್ಣಕ್ಕೆ ₹5 ಕೋಟಿ ಹೆಚ್ಚುವರಿ ಅನುದಾನ ನೀಡಬೇಕು ಎಂದು ಕೋರಿದರು.</p>.<p><strong>ಪ್ರಮುಖ ಬೇಡಿಕೆಗಳು</strong></p>.<p>* ವಿದ್ಯುತ್ ತೆರಿಗೆಯನ್ನು ಶೇ 9ರಿಂದ ಶೇ 6ಕ್ಕೆ ಇಳಿಸಬೇಕು</p>.<p>* ಬೆಲ್ಲ ಉತ್ಪಾದಕರಿಗೆ ಪ್ರೋತ್ಸಾಹ ನೀಡಬೇಕು</p>.<p>* ರೋಗಗ್ರಸ್ತ ಘಟಕಗಳನ್ನು ಪುನಃಶ್ಚೇತನಗೊಳಿಸಬೇಕು</p>.<p>* ಕೃಷಿ ಯಂತ್ರೋಪಕರಣಗಳ ಪರೀಕ್ಷಾ ವರದಿಗೆ ಕನಿಷ್ಠ ದರ ನಿಗದಿ ಮಾಡಬೇಕು</p>.<p>* ಶೇ 100ರಷ್ಟು ನವೀಕರಿಸಬಹುದಾದ ಇಂಧನ ಬಳಸುವ ಕೈಗಾರಿಕೋದ್ಯಮಿಗಳಿಗೆ ಬೆಂಬಲ ನೀಡಬೇಕು</p>.<p>* ಕೇಂದ್ರದ ವಿವಾದ್ ಸೆ ವಿಶ್ವಾಸ್ ಯೋಜನೆ ಮಾದರಿಯಂತೆ ರಾಜ್ಯದ ಎಂಎಸ್ಎಇಗಳಿಗೆ ತೆರಿಗೆ ವಿವಾದ ಬಗೆಹರಿಸಿಕೊಳ್ಳಲು ಯೋಜನೆ ಜಾರಿಗೊಳಿಸಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಆಸ್ತಿ ನೋಂದಣಿಗೆ ಇ-ಖಾತಾ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಅತಿಸಣ್ಣ ಮತ್ತು ಸಣ್ಣ ಕೈಗಾರಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಕೂಡಲೇ, ರಾಜ್ಯ ಸರ್ಕಾರವು ಈ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಒತ್ತಾಯಿಸಿದೆ.</p>.<p>ಶುಕ್ರವಾರ ನಡೆದ 2025–26ನೇ ಸಾಲಿನ ರಾಜ್ಯ ಬಜೆಟ್ ಪೂರ್ವ ಸಮಾಲೋಚನೆ ಸಭೆಯಲ್ಲಿ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಸಿಯಾ ಅಧ್ಯಕ್ಷ ಎಂ.ಜಿ. ರಾಜಗೋಪಾಲ್ ಮನವಿ ಪತ್ರ ಸಲ್ಲಿಸಿದರು.</p>.<p>ತಂತ್ರಾಂಶ ದೋಷದಿಂದಾಗಿ ಇ-ಖಾತಾದಲ್ಲಿನ ಲೋಪದೋಷ ಸರಿಪಡಿಸಲು ಬಹಳ ತಡವಾಗುತ್ತಿದೆ. ಇದನ್ನು ಸರಿಪಡಿಸಿದ ಇ-ಖಾತಾ ಪಡೆಯಲು ವಿಳಂಬವಾಗುತ್ತಿದೆ. ಬ್ಯಾಂಕ್ಗಳು ಮತ್ತು ಇತರೆ ಹಣಕಾಸು ಸಂಸ್ಥೆಗಳು ನೋಂದಾಯಿಸಲು ಸಾಧ್ಯವಾಗದ ಸ್ವತ್ತುಗಳ ಮೇಲೆ ಸಾಲ ನೀಡಲು ನಿರಾಕರಿಸುತ್ತಿವೆ ಎಂದು ಗಮನ ಸೆಳೆದರು.</p>.<p>ಬಹಳಷ್ಟು ಕೈಗಾರಿಕೆಗಳು ಕಂದಾಯ ನಿವೇಶನಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಈ ಕಟ್ಟಡಗಳು ಸಕ್ಷಮ ಪ್ರಾಧಿಕಾರಿಗಳಿಂದ ಯೋಜನೆಗಳಿಗೆ ಭೂ ಪರಿವರ್ತನೆ ಅಥವಾ ನಕ್ಷೆ ಅನುಮೋದನೆ ಪಡೆದಿಲ್ಲ. ಖಾತಾ ನೀಡುವುದು ನಿವೇಶನಕ್ಕೆ ಹೊರತು ಕಟ್ಟಡಕ್ಕಲ್ಲ ಎಂಬ ಅಂಶವನ್ನು ಪರಿಗಣಿಸಿ ರಾಜ್ಯವನ್ನು ಉದ್ಯಮ ಸ್ನೇಹಿಯಾಗಿ ಮಾಡಲು ನಿಟ್ಟಿನಲ್ಲಿ ಇಂತಹ ನಿಯಮಗಳನ್ನು ಪರಿಷ್ಕರಿಸಬೇಕಿದೆ ಎಂದರು.</p>.<p>ಪಂಚಾಯಿತಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಮಾರ್ಗಸೂಚಿ ದರಗಳ ಆಧಾರದ ಮೇಲೆ ನಿಗದಿಪಡಿಸಲಾಗುತ್ತಿದೆ. ಈ ವ್ಯವಸ್ಥೆಯು ಅವೈಜ್ಞಾನಿಕವಾಗಿದೆ. ಇದನ್ನು ಬಿಬಿಎಂಪಿಯಂತೆ ಯೂನಿಟ್ ಏರಿಯಾ ವ್ಯಾಲ್ಯೂ (ಯುಎವಿ) ಆಧಾರದ ತೆರಿಗೆ ನಿಗದಿಪಡಿಸಬೇಕಿದೆ ಎಂದು ಮನವಿ ಮಾಡಿದರು.</p>.<p>ಕೈಗಾರಿಕಾ ಪ್ರದೇಶಗಳಲ್ಲಿ ಸಂಗ್ರಹಿಸುವ ಆಸ್ತಿ ತೆರಿಗೆಯ ಶೇ 70ರಷ್ಟನ್ನು ಕೈಗಾರಿಕಾ ಮೂಲಸೌಕರ್ಯದ ಅಭಿವೃದ್ಧಿಗೆ ಮೀಸಲಿಡಬೇಕು. ಕಾಸಿಯಾದ ಶ್ರೇಷ್ಠತಾ ಹಾಗೂ ಅನ್ವೇಷಣಾ ಕೇಂದ್ರದ ಕಾಮಗಾರಿ ಪೂರ್ಣಕ್ಕೆ ₹5 ಕೋಟಿ ಹೆಚ್ಚುವರಿ ಅನುದಾನ ನೀಡಬೇಕು ಎಂದು ಕೋರಿದರು.</p>.<p><strong>ಪ್ರಮುಖ ಬೇಡಿಕೆಗಳು</strong></p>.<p>* ವಿದ್ಯುತ್ ತೆರಿಗೆಯನ್ನು ಶೇ 9ರಿಂದ ಶೇ 6ಕ್ಕೆ ಇಳಿಸಬೇಕು</p>.<p>* ಬೆಲ್ಲ ಉತ್ಪಾದಕರಿಗೆ ಪ್ರೋತ್ಸಾಹ ನೀಡಬೇಕು</p>.<p>* ರೋಗಗ್ರಸ್ತ ಘಟಕಗಳನ್ನು ಪುನಃಶ್ಚೇತನಗೊಳಿಸಬೇಕು</p>.<p>* ಕೃಷಿ ಯಂತ್ರೋಪಕರಣಗಳ ಪರೀಕ್ಷಾ ವರದಿಗೆ ಕನಿಷ್ಠ ದರ ನಿಗದಿ ಮಾಡಬೇಕು</p>.<p>* ಶೇ 100ರಷ್ಟು ನವೀಕರಿಸಬಹುದಾದ ಇಂಧನ ಬಳಸುವ ಕೈಗಾರಿಕೋದ್ಯಮಿಗಳಿಗೆ ಬೆಂಬಲ ನೀಡಬೇಕು</p>.<p>* ಕೇಂದ್ರದ ವಿವಾದ್ ಸೆ ವಿಶ್ವಾಸ್ ಯೋಜನೆ ಮಾದರಿಯಂತೆ ರಾಜ್ಯದ ಎಂಎಸ್ಎಇಗಳಿಗೆ ತೆರಿಗೆ ವಿವಾದ ಬಗೆಹರಿಸಿಕೊಳ್ಳಲು ಯೋಜನೆ ಜಾರಿಗೊಳಿಸಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>