‘ದೂರಸಂಪರ್ಕ ವಲಯ ಸಂಕಷ್ಟದಲ್ಲಿರುವ ಪರಿಸ್ಥಿತಿಯಲ್ಲಿಯೂ ಬ್ಯಾಂಕ್ಗಳು ಯಾವುದೇ ರೀತಿಯ ಕ್ರಮ ಕೈಗೊಳ್ಳಲು ಆಸಕ್ತಿ ತೋರಿಸುತ್ತಿಲ್ಲ. ಹೀಗಾಗಿ ಸರ್ಕಾರವು ಉದ್ಯಮದ ಬೆಂಬಲಕ್ಕೆ ಇದೆ ಎನ್ನುವ ಸ್ಪಷ್ಟ ಸಂದೇಶವನ್ನು ಬ್ಯಾಂಕ್ಗಳಿಗೆ ರವಾನಿಸಬೇಕಾಗಿದೆ.ಸಾಲದ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವಂತೆ ಬ್ಯಾಂಕ್ಗಳು ಸತತವಾಗಿ ಹೇಳುತ್ತಲೇ ಬಂದಿವೆ. ಹೊಸ ಸಾಲ ನೀಡಲು ನಿರಾಕರಿಸುತ್ತಿರುವುದಷ್ಟೇ ಅಲ್ಲದೆ ಸಾಲ ಮರುಹೊಂದಾಣಿಕೆಯನ್ನೂ ಮಾಡುತ್ತಿಲ್ಲ’ ಎಂದು ಸಂಘದ ಪ್ರಧಾನ ನಿರ್ದೇಶಕ ರಾಜನ್ ಮ್ಯಾಥೀವ್ಸ್ ಅವರು ದೂರಸಂಪರ್ಕ ಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.