ಭಾರತ್ ಛೇಂಬರ್ ಆಫ್ ಕಾಮರ್ಸ್ ಆಯೋಜಿಸಿದ್ದ ವೆಬಿನಾರ್ನಲ್ಲಿ ಮಾತನಾಡಿದ ಅವರು, ಕೋವಿಡ್ ನಿಯಂತ್ರಿಸಲು ಲಾಕ್ಡೌನ್ ಜಾರಿಗೊಳಿಸಿದ್ದರಿಂದ ಕಲ್ಲಿದ್ದಲು ಬೇಡಿಕೆ ಮೇಲೆ ಪ್ರತಿಕೂಲ ಪರಿಣಾಮ ಬೀರಿತ್ತು. ಆದರೆ, ಇದೀಗ ಕೈಗಾರಿಕೆಗಳು ಮತ್ತೆ ಚಟುವಟಿಕೆ ಆರಂಭಿಸಿರುವುದರಿಂದ ಬೇಡಿಕೆ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಈ ಪರಿಸ್ಥಿತಿಯನ್ನು ಪರಿಗಣಿಸಿ ಉತ್ಪಾದನೆಯ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.