ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಮತ್ತು ಸಂಜೀವ್ ಖನ್ನಾ ಅವರು ಇದ್ದ ನ್ಯಾಯಪೀಠ ಈ ಅರ್ಜಿಯ ವಿಚಾರಣೆ ನಡೆಸಿದೆ. ‘ನಾವು ಕಾನೂನಿನ ಅಂಶಗಳನ್ನು ವ್ಯಾಖ್ಯಾನಿಸಿದ್ದೇವೆ. ಸಾಲಪತ್ರ ಆಧಾರಿತ ಯೋಜನೆಗಳನ್ನು ಸ್ಥಗಿತಗೊಳಿಸುವ ಮೊದಲು ಹೂಡಿಕೆದಾರರಿಂದ ಬಹುಮತದ ಒಪ್ಪಿಗೆ ಪಡೆದುಕೊಳ್ಳಬೇಕು ಎಂಬ ಬಗ್ಗೆ ಹೈಕೋರ್ಟ್ ವ್ಯಕ್ತಪಡಿಸಿದ ಅಭಿಪ್ರಾಯವನ್ನು ಒಪ್ಪಿದ್ದೇವೆ’ ಎಂದು ನ್ಯಾಯಪೀಠ ಹೇಳಿದೆ.