ಈ ನಿರ್ಧಾರವು ಸಹಕಾರಿ ಬ್ಯಾಂಕ್ಗಳ ಠೇವಣಿದಾರರಿಗೆ ಭಾರಿ ನೆಮ್ಮದಿ ನೀಡಲಿದೆ. ಸದ್ಯಕ್ಕೆ ವಾಣಿಜ್ಯ ಬ್ಯಾಂಕ್ಗಳಿಗೆ ಅನ್ವಯಿಸುವ ಆರ್ಬಿಐನ ಮೇಲ್ವಿಚಾರಣೆ ಪ್ರಕ್ರಿಯೆಯು ಇನ್ನು ಮುಂದೆ ಪಟ್ಟಣ ಸಹಕಾರಿ ಬ್ಯಾಂಕ್ ಮತ್ತು ಬಹು ರಾಜ್ಯ ವ್ಯಾಪ್ತಿಯ ಸಹಕಾರಿ ಬ್ಯಾಂಕ್ಗಳಿಗೂ ಅನ್ವಯವಾಗಲಿದೆ. ಈ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.