<p><strong>ನವದೆಹಲಿ:</strong> ಏರ್ ಇಂಡಿಯಾದಲ್ಲಿ ವೆಚ್ಚ ಕಡಿತ ಅನಿವಾರ್ಯ ಎಂದು ಹೇಳುವ ಮೂಲಕ ಕೆಲ ಸಿಬ್ಬಂದಿಗೆ ವೇತನ ರಹಿತ ಕಡ್ಡಾಯ ರಜೆ ನೀಡುವ ಸಂಸ್ಥೆಯ ನಿರ್ಧಾರವನ್ನು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಸಮರ್ಥಿಸಿಕೊಂಡಿದ್ದಾರೆ.</p>.<p>‘ಪ್ರತಿ ವರ್ಷವೂ ಷೇರು ಮಾರಾಟ ಮಾಡುವ ಮೂಲಕ ₹ 500 ಕೋಟಿ ಅಥವಾ ₹ 600 ಕೋಟಿ ಹೂಡಿಕೆ ಮಾಡುವುದು ಸಮರ್ಥನೀಯವಲ್ಲ’ ಎಂದಿದ್ದಾರೆ.</p>.<p>‘ವೇತನ ರಹಿತ ರಜೆ ಯೋಜನೆಯು ಕಾರ್ಮಿಕ ಕಾಯ್ದೆಯ ಉಲ್ಲಂಘನೆಯಾಗಿದ್ದು, ಉನ್ನತಾಧಿಕಾರಿಗಳನ್ನು ರಕ್ಷಿಸಲು ಬೇರೆ ಸಿಬ್ಬಂದಿಯನ್ನು ಬಲಿಕೊಡಲಾಗುತ್ತಿದೆ’ ಎಂದು ಟಿಎಂಸಿ ಸಂಸದ ಡರೆಕ್ ಒ ಬ್ರಯಾನ್ ಟೀಕೆಗೆ ಸಚಿವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.</p>.<p>‘ಏರ್ ಇಂಡಿಯಾ ಸಂಸ್ಥೆಯು ಸರ್ಕಾರದಿಂದ ನೆರವು ಬಯಸಿದರೆ, ಅದನ್ನು ನೀಡಲು ಸದ್ಯಕ್ಕಂತೂ ಸಾಧ್ಯವಿಲ್ಲ. ಕೋವಿಡ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ಸಮಾಜದ ಬೇರೆ ಬೇರೆ ವರ್ಗಗಳಿಗೆ ಪರಿಹಾರ ನೀಡುವ ಬೇಡಿಕೆಯನ್ನು ಪೂರೈಸಬೇಕಿದೆ’ ಎಂದು ಹೇಳುವ ಮೂಲಕ ಸರ್ಕಾರದಿಂದ ನೆರವು ಸಿಗುವುದಿಲ್ಲ ಎನ್ನುವುದನ್ನೂ ಅವರು ತಿಳಿಸಿದ್ದಾರೆ.</p>.<p><strong>ಅಂಕಿ–ಅಂಶ</strong></p>.<p>₹ 70 ಸಾವಿರ ಕೋಟಿ:ಏರ್ ಇಂಡಿಯಾದ ಒಟ್ಟು ನಷ್ಟ</p>.<p>₹ 8,500 ಕೋಟಿ: 2018–19ರಲ್ಲಿ ಸಂಸ್ಥೆಯ ನಷ್ಟ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಏರ್ ಇಂಡಿಯಾದಲ್ಲಿ ವೆಚ್ಚ ಕಡಿತ ಅನಿವಾರ್ಯ ಎಂದು ಹೇಳುವ ಮೂಲಕ ಕೆಲ ಸಿಬ್ಬಂದಿಗೆ ವೇತನ ರಹಿತ ಕಡ್ಡಾಯ ರಜೆ ನೀಡುವ ಸಂಸ್ಥೆಯ ನಿರ್ಧಾರವನ್ನು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಸಮರ್ಥಿಸಿಕೊಂಡಿದ್ದಾರೆ.</p>.<p>‘ಪ್ರತಿ ವರ್ಷವೂ ಷೇರು ಮಾರಾಟ ಮಾಡುವ ಮೂಲಕ ₹ 500 ಕೋಟಿ ಅಥವಾ ₹ 600 ಕೋಟಿ ಹೂಡಿಕೆ ಮಾಡುವುದು ಸಮರ್ಥನೀಯವಲ್ಲ’ ಎಂದಿದ್ದಾರೆ.</p>.<p>‘ವೇತನ ರಹಿತ ರಜೆ ಯೋಜನೆಯು ಕಾರ್ಮಿಕ ಕಾಯ್ದೆಯ ಉಲ್ಲಂಘನೆಯಾಗಿದ್ದು, ಉನ್ನತಾಧಿಕಾರಿಗಳನ್ನು ರಕ್ಷಿಸಲು ಬೇರೆ ಸಿಬ್ಬಂದಿಯನ್ನು ಬಲಿಕೊಡಲಾಗುತ್ತಿದೆ’ ಎಂದು ಟಿಎಂಸಿ ಸಂಸದ ಡರೆಕ್ ಒ ಬ್ರಯಾನ್ ಟೀಕೆಗೆ ಸಚಿವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.</p>.<p>‘ಏರ್ ಇಂಡಿಯಾ ಸಂಸ್ಥೆಯು ಸರ್ಕಾರದಿಂದ ನೆರವು ಬಯಸಿದರೆ, ಅದನ್ನು ನೀಡಲು ಸದ್ಯಕ್ಕಂತೂ ಸಾಧ್ಯವಿಲ್ಲ. ಕೋವಿಡ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ಸಮಾಜದ ಬೇರೆ ಬೇರೆ ವರ್ಗಗಳಿಗೆ ಪರಿಹಾರ ನೀಡುವ ಬೇಡಿಕೆಯನ್ನು ಪೂರೈಸಬೇಕಿದೆ’ ಎಂದು ಹೇಳುವ ಮೂಲಕ ಸರ್ಕಾರದಿಂದ ನೆರವು ಸಿಗುವುದಿಲ್ಲ ಎನ್ನುವುದನ್ನೂ ಅವರು ತಿಳಿಸಿದ್ದಾರೆ.</p>.<p><strong>ಅಂಕಿ–ಅಂಶ</strong></p>.<p>₹ 70 ಸಾವಿರ ಕೋಟಿ:ಏರ್ ಇಂಡಿಯಾದ ಒಟ್ಟು ನಷ್ಟ</p>.<p>₹ 8,500 ಕೋಟಿ: 2018–19ರಲ್ಲಿ ಸಂಸ್ಥೆಯ ನಷ್ಟ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>