<p><strong>ಮುಂಬೈ</strong>: ದೇಶದ ಒಟ್ಟು ಆಂತರಿಕ ಉತ್ಪನ್ನಕ್ಕೆ (ಜಿಡಿಪಿ) ಶೇ 60ರಷ್ಟು ಕೊಡುಗೆ ನೀಡುತ್ತಿರುವ 8 ರಾಜ್ಯಗಳು ಕೋವಿಡ್–19ನಿಂದ ಅತಿ ಹೆಚ್ಚು ಹಾನಿಗೆ ಗುರಿಯಾಗಿವೆ ಎಂದು ರೇಟಿಂಗ್ಸ್ ಸಂಸ್ಥೆ ಕ್ರಿಸಿಲ್ ಹೇಳಿದೆ.</p>.<p>ಲಾಕ್ಡೌನ್ನಿಂದಾಗಿಮಹಾರಾಷ್ಟ್ರ, ತಮಿಳುನಾಡು, ಗುಜರಾತ್, ಆಂಧ್ರಪ್ರದೇಶ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳು ಹೆಚ್ಚು ಬಾಧಿತವಾಗಿವೆ. ಉದ್ಯೋಗ ಸೃಷ್ಟಿಯಲ್ಲಿ ಈ ರಾಜ್ಯಗಳ ಕೊಡುಗೆ ಶೇ 58ರಷ್ಟಿದೆ ಎಂದು ತಿಳಿಸಿದೆ.</p>.<p>ಲಾಕ್ಡೌನ್ ಅವಧಿಯನ್ನು ಮೇ 31ರವರೆಗೂ ವಿಸ್ತರಿಸಲಾಗಿದ್ದು, ವಲಯವಾರು ನಿಯಮ ಸಡಿಲಿಸುವ ನಿರ್ಧಾರವನ್ನು ರಾಜ್ಯಗಳಿಗೆ ನೀಡಲಾಗಿದೆ.ಆದರೆ, ಈ ರಾಜ್ಯಗಳಲ್ಲಿ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಹೀಗಾಗಿ ಮಹಾರಾಷ್ಟ್ರ ಒಳಗೊಂಡು ಅತಿ ಹೆಚ್ಚು ಬಾಧಿತ ರಾಜ್ಯಗಳಲ್ಲಿ ಕೆಲವು ರಾಜ್ಯಗಳು ನಿರ್ಬಂಧವನ್ನು ಈ ತಿಂಗಳ ಅಂತ್ಯದವರೆಗೂ ಮುಂದುವರಿಸಲು ನಿರ್ಧರಿಸಿವೆ.</p>.<p>ಮಹಾರಾಷ್ಟ್ರ, ತಮಿಳುನಾಡು ಮತ್ತು ಗುಜರಾತ್ ರಾಜ್ಯಗಳು ಕೈಗಾರಿಕೆ ಮತ್ತು ಸೇವೆಗಳ ವರಮಾನದ ಮೇಲೆ ಅವಲಂಬಿತವಾಗಿವೆ. ಆಂಧ್ರಪ್ರದೇಶ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳು ಪೆಟ್ರೋಲಿಯಂ, ಮದ್ಯ ಮತ್ತು ಸ್ಟ್ಯಾಂಪ್ ಶುಲ್ಕದ ಮೇಲೆ ಹೆಚ್ಚು ಅವಲಂಬಿತವಾಗಿವೆ. ಆರ್ಥಿಕ ಚಟುವಟಿಕೆಗಳನ್ನು ನಿರ್ಬಂಧಿಸಿರುವುದರಿಂದ ವರಮಾನಕ್ಕೆ ಪೆಟ್ಟು ಬಿದ್ದಿದೆ.</p>.<p>ಕೃಷಿಯ ಮೇಲೆ ಹೆಚ್ಚು ಅವಲಂಬಿತ ರಾಜ್ಯಗಳಾದ ಆಂಧ್ರ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ವಾಡಿಕೆಯಂತೆ ಸಾಮಾನ್ಯ ಮಳೆಯಾದರೆ ಪರಿಸ್ಥಿತಿ ತಕ್ಕ ಮಟ್ಟಿಗೆ ಸುಧಾರಿಸುವ ನಿರೀಕ್ಷೆ ಇದೆ.</p>.<p>ಕಡಿಮೆ ಬಾಧಿತ ರಾಜ್ಯಗಳಲ್ಲಿ ಆರ್ಥಿಕ ಚಟುವಟಿಕೆಗಳ ಮೇಲಿನ ನಿರ್ಬಂಧದಿಂದ ಕೈಗಾರಿಕೆ ಮತ್ತು ಸೇವೆಗಳ ಮೇಲೆ ಹೆಚ್ಚಿನ ಅವಲಂಬನೆ ಇರುವ ಕರ್ನಾಟಕ ಮತ್ತು ಕೇರಳದ ಮೇಲೆ ಪರಿಣಾಮ ಬೀರಿದೆ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ದೇಶದ ಒಟ್ಟು ಆಂತರಿಕ ಉತ್ಪನ್ನಕ್ಕೆ (ಜಿಡಿಪಿ) ಶೇ 60ರಷ್ಟು ಕೊಡುಗೆ ನೀಡುತ್ತಿರುವ 8 ರಾಜ್ಯಗಳು ಕೋವಿಡ್–19ನಿಂದ ಅತಿ ಹೆಚ್ಚು ಹಾನಿಗೆ ಗುರಿಯಾಗಿವೆ ಎಂದು ರೇಟಿಂಗ್ಸ್ ಸಂಸ್ಥೆ ಕ್ರಿಸಿಲ್ ಹೇಳಿದೆ.</p>.<p>ಲಾಕ್ಡೌನ್ನಿಂದಾಗಿಮಹಾರಾಷ್ಟ್ರ, ತಮಿಳುನಾಡು, ಗುಜರಾತ್, ಆಂಧ್ರಪ್ರದೇಶ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳು ಹೆಚ್ಚು ಬಾಧಿತವಾಗಿವೆ. ಉದ್ಯೋಗ ಸೃಷ್ಟಿಯಲ್ಲಿ ಈ ರಾಜ್ಯಗಳ ಕೊಡುಗೆ ಶೇ 58ರಷ್ಟಿದೆ ಎಂದು ತಿಳಿಸಿದೆ.</p>.<p>ಲಾಕ್ಡೌನ್ ಅವಧಿಯನ್ನು ಮೇ 31ರವರೆಗೂ ವಿಸ್ತರಿಸಲಾಗಿದ್ದು, ವಲಯವಾರು ನಿಯಮ ಸಡಿಲಿಸುವ ನಿರ್ಧಾರವನ್ನು ರಾಜ್ಯಗಳಿಗೆ ನೀಡಲಾಗಿದೆ.ಆದರೆ, ಈ ರಾಜ್ಯಗಳಲ್ಲಿ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಹೀಗಾಗಿ ಮಹಾರಾಷ್ಟ್ರ ಒಳಗೊಂಡು ಅತಿ ಹೆಚ್ಚು ಬಾಧಿತ ರಾಜ್ಯಗಳಲ್ಲಿ ಕೆಲವು ರಾಜ್ಯಗಳು ನಿರ್ಬಂಧವನ್ನು ಈ ತಿಂಗಳ ಅಂತ್ಯದವರೆಗೂ ಮುಂದುವರಿಸಲು ನಿರ್ಧರಿಸಿವೆ.</p>.<p>ಮಹಾರಾಷ್ಟ್ರ, ತಮಿಳುನಾಡು ಮತ್ತು ಗುಜರಾತ್ ರಾಜ್ಯಗಳು ಕೈಗಾರಿಕೆ ಮತ್ತು ಸೇವೆಗಳ ವರಮಾನದ ಮೇಲೆ ಅವಲಂಬಿತವಾಗಿವೆ. ಆಂಧ್ರಪ್ರದೇಶ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳು ಪೆಟ್ರೋಲಿಯಂ, ಮದ್ಯ ಮತ್ತು ಸ್ಟ್ಯಾಂಪ್ ಶುಲ್ಕದ ಮೇಲೆ ಹೆಚ್ಚು ಅವಲಂಬಿತವಾಗಿವೆ. ಆರ್ಥಿಕ ಚಟುವಟಿಕೆಗಳನ್ನು ನಿರ್ಬಂಧಿಸಿರುವುದರಿಂದ ವರಮಾನಕ್ಕೆ ಪೆಟ್ಟು ಬಿದ್ದಿದೆ.</p>.<p>ಕೃಷಿಯ ಮೇಲೆ ಹೆಚ್ಚು ಅವಲಂಬಿತ ರಾಜ್ಯಗಳಾದ ಆಂಧ್ರ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ವಾಡಿಕೆಯಂತೆ ಸಾಮಾನ್ಯ ಮಳೆಯಾದರೆ ಪರಿಸ್ಥಿತಿ ತಕ್ಕ ಮಟ್ಟಿಗೆ ಸುಧಾರಿಸುವ ನಿರೀಕ್ಷೆ ಇದೆ.</p>.<p>ಕಡಿಮೆ ಬಾಧಿತ ರಾಜ್ಯಗಳಲ್ಲಿ ಆರ್ಥಿಕ ಚಟುವಟಿಕೆಗಳ ಮೇಲಿನ ನಿರ್ಬಂಧದಿಂದ ಕೈಗಾರಿಕೆ ಮತ್ತು ಸೇವೆಗಳ ಮೇಲೆ ಹೆಚ್ಚಿನ ಅವಲಂಬನೆ ಇರುವ ಕರ್ನಾಟಕ ಮತ್ತು ಕೇರಳದ ಮೇಲೆ ಪರಿಣಾಮ ಬೀರಿದೆ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>