ಕಳೆದ ವರ್ಷಕ್ಕಿಂತ ಶೇ.50ರಷ್ಟು ವ್ಯಾಪಾರ ಹೆಚ್ಚಿರುವುದಾಗಿ ಕಲ್ಯಾಣ್ ಜ್ಯುವೆಲ್ಲರ್ಸ್ನ ಕಾರ್ಯನಿರ್ವಾಹಕ ನಿರ್ದೇಶಕ ರಮೇಶ್ ಕಲ್ಯಾಣರಮಣ್ ತಿಳಿಸಿದ್ದಾರೆ. ''ಕಳೆದ ತ್ರೈಮಾಸಿಕ ಅವಧಿಯಲ್ಲಿ ಅತಿಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಖರೀದಿ ವಹಿವಾಟು ನಡೆದಿದೆ. ಇದೇ ಮೊದಲ ಬಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭೇಟಿ ನೀಡುತ್ತಿದ್ದಾರೆ. ಕೊರೊನಾ ವೈರಸ್ ನಿರ್ಮಿಸಿರುವ ಸಂಕಷ್ಟದ ಪರಿಸ್ಥಿತಿಯಲ್ಲಿ ಜನಜಂಗುಳಿಯಿರುವ ಬೀದಿಗಳ ಅಂಗಡಿಗಳಿಗೆ ಮತ್ತು ಸಣ್ಣಪುಟ್ಟ ಚಿನ್ನದಂಗಡಿಗಳಿಗೆ ಹೋಗಲು ಗ್ರಾಹಕರು ಹೆದರುತ್ತಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಕಲ್ಯಾಣ್ ಜ್ಯೂವೆಲ್ಲರ್ಸ್ ನಂತಹ ದೊಡ್ಡ ಮಳಿಗೆ ಭೇಟಿ ನೀಡುತ್ತಿದ್ದಾರೆ'' ಎಂದು ತಿಳಿಸಿದ್ದಾರೆ.